ಸೇವೆ ಕಾಯಂ ಮಾಡಲು ಆಗ್ರಹಿಸಿ ನವೆಂಬರ್ ಕೊನೆಯ ವಾರದಲ್ಲಿ ರಾಜ್ಯದಾದ್ಯಂತ ಅತಿಥಿ ಉಪನ್ಯಾಸಕರು ಪ್ರತಿಭಟನೆ ಆರಂಭಿಸಿದ್ದರು. ಒಂದು ತಿಂಗಳು ಕಳೆದ ಬಳಿಕ ರಾಜ್ಯ ಸರ್ಕಾರ ಅವರ ಹಲವು ಬೇಡಿಕೆಗಳಿಗೆ ಸ್ಪಂದಿಸಿತ್ತು. ಆದರೆ, ಅವರು ಸೇವೆ ಕಾಯಂ ಮಾಡುವ ಬೇಡಿಕೆ ಈಡೇರದ ಕಾರಣ ತಮ್ಮ ಬೇಡಿಕೆಯ ಪಟ್ಟು ಸಡಿಲಿಸಿಲ್ಲ. ಆದ್ದರಿಂದ ಈಗ ತುಮಕೂರಿನಿಂದ ಬೆಂಗಳೂರಿನ ತನಕ ಪಾದಯಾತ್ರೆ ನಡೆಸುತ್ತಿದ್ದು, ಇದರಲ್ಲಿ ಜಿಲ್ಲೆಯ ಉಪನ್ಯಾಸಕರು ಭಾಗಿಯಾಗಿದ್ದಾರೆ.