ಕುಡಿಯುವ ನೀರು, ರಸ್ತೆ ಡಾಂಬರೀಕರಣ, ಸಿಮೆಂಟ್ ರಸ್ತೆ, ವಸತಿ ನಿರ್ಮಾಣ, ಕೆರೆ, ಚೆಕ್ಡ್ಯಾಂ, ಗ್ರಾಮೀಣ ಭಾಗದ ಮಹಿಳೆಯರಿಗಾಗಿ ಉದ್ಯೋಗ ಕಲ್ಪಿಸಲು ನರೇಗಾ ಯೋಜನೆ, ಸಾರಿಗೆ ವ್ಯವಸ್ಥೆ, ವೃದ್ಧಾಪ್ಯ ವೇತನ ಹಾಗೂ ರೈತರ ಯೋಜನೆಗಳಾದ ಕೃಷಿ ಸಮ್ಮಾನ ಯೋಜನೆ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತಂದಿವೆ. ಇವುಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದರು.ಕ್ಷೇತ್ರದಲ್ಲಿ 30 ವರ್ಷಗಳ ಕಾಲ ಆಡಳಿತ ನಡೆಸಿದ ಮಾಜಿ ಶಾಸಕರು ಜನರ ದಾರಿ ತಪ್ಪಿಸಿ, ರೈತರ ಕಾಳಜಿಯನ್ನ ಮಾಡದೆ, ಕೇವಲ ಕಟ್ಟಡಗಳ ನಿರ್ಮಾಣವನ್ನೇ ದೊಡ್ಡ ಸಾಧನೆ ಎನ್ನುವಂತೆ ಫೋಸು ನೀಡುತ್ತಿದ್ದಾರೆ ಎಂದರು. ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೋಮಶೇಖರ ಬಿರಾದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಚನಬಸಪ್ಪ ಆಡೂರು, ಮುಖಂಡರಾದ ಹನುಮಂತಪ್ಪ ರೆಡ್ಡಿ, ಪ್ರಭು ಮುತ್ತಾಳ, ಹೊನ್ನಪ್ಪ ದೊಡಮನಿ, ವೀರೇಶ್ ನಾಗೋಜಿ, ಹೇಮಣ್ಣ ಹೊಸಮನಿ, ಸಂಗಪ್ಪ ಮುತ್ತಾಳ, ಪಿಎಂಜಿಎಸ್ ವೈ ಜಿಲ್ಲಾ ಅಧಿಕಾರಿ ಅಶೋಕ ಚಲವಾದಿ, ಬಸಲಿಂಗಪ್ಪ ಭೂತೆ, ಸಿ.ಎಚ್ ಪೋಲಿಸ್ ಪಾಟೀಲ್, ಶರಣಪ್ಪ ಮಂಡಲಗಿರಿ, ವೀರಣ್ಣ ಹುಬ್ಬಳ್ಳಿ, ಮಾರುತಿ ಗಾವರಾಳ ಹಾಗೂ ಕಳಕಪ್ಪ ಕಂಬಳಿ ಇದ್ದರು.