ಉಪ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳ ಯಾದಿಯಲ್ಲಿ ಕಾಂಗ್ರೆಸ್ನ ಡಿ.ಕೆ. ಶಿವಕುಮಾರ್, ಮಧ್ಯಕರ್ನಾಟಕದಿಂದ ವೀರಶೈವ ಮಹಾಸಭಾದ ಅಧ್ಯಕ್ಷರೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ, ಎಂ.ಬಿ. ಪಾಟೀಲ್ ಮತ್ತಿತರರ ಹೆಸರೂ ಕೇಳಿಬಂದಿತ್ತು. ಡಿ.ಕೆ. ಶಿವಕುಮಾರ್ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಆಗ್ರಹವೂ ವ್ಯಕ್ತವಾಗಿತ್ತು. ಮತ್ತೊಂದೆಡೆ, ಉತ್ತರ ಕರ್ನಾಟಕ ಭಾಗದ ನಾಯಕರನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಬೇಕು ಎಂಬ ಕೂಗೂ ಕೇಳಿಬಂದಿತ್ತು.