<p><strong>ಗಂಗಾವತಿ: </strong>ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಭಾನುವಾರ ಹನುಮ ಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಿತು.</p>.<p>ತಾಲ್ಲೂಕು ಆಡಳಿತದ ವತಿಯಿಂದ ಯಾವುದೇ ವ್ಯವಸ್ಥೆ ಮಾಡಿರಲಿಲ್ಲ. ಆದರೂ ವಿವಿಧ ಜಿಲ್ಲೆಗಳಿಂದ ಹನುಮ ಮಾಲಾಧಾರಿಗಳು ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಾಲೆ ವಿಸರ್ಜನೆ ಮಾಡಿದರು.</p>.<p>ಜಿಲ್ಲಾಧಿಕಾರಿ ಆದೇಶದಂತೆ ತಾಲ್ಲೂಕು ಆಡಳಿತ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ನಡೆಸಿದರು.</p>.<p>ದೇವಸ್ಥಾನವನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಬೆಳಿಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ, ಪವನ, ಹೋಮ–ಹವನ, ಪ್ರವಚನ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಬಳ್ಳಾರಿ, ಗದಗ, ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ರಾಯಚೂರು ಹಾಗೂ ಯಾದಗಿರಿ ಸೇರಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಭಕ್ತರು ಆಗಮಿಸಿದ್ದರು.</p>.<p><strong>16 ಸಿ.ಸಿ ಕ್ಯಾಮೆರಾ ಅಳವಡಿಕೆ :</strong> ಮುಂಜಾಗ್ರತಾ ಕ್ರಮವಾಗಿ ಗರ್ಭಗುಡಿ, ದೇವಸ್ಥಾನದ ಆವರಣ ಹಾಗೂ ಮೆಟ್ಟಿಲು ಸೇರಿ ವಿವಿಧೆಡೆ 16 ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.</p>.<p><strong>10 </strong><strong>ಸಾವಿರಕ್ಕೂ ಹೆಚ್ಚು </strong><strong>ಮಾಲಾಧಾರಿಗಳು: </strong>ಜಿಲ್ಲಾಡಳಿತ ಬೆಟ್ಟದಲ್ಲಿ ಹನುಮ ಮಾಲಾ ವಿಸರ್ಜನೆ ನಿಷೇಧಿಸಿತ್ತು. ಆದರೂ ಹೊರ ಜಿಲ್ಲೆಗಳ 10 ಸಾವಿರಕ್ಕೂ ಹೆಚ್ಚು ಭಕ್ತರು ಆಂಜನೇಯಸ್ವಾಮಿಯ ದರ್ಶನ ಪಡೆದರು. ಮಾಲೆ ವಿಸರ್ಜನೆ ಮಾಡಿದರು.</p>.<p>ವಿವಿಧ ಜಿಲ್ಲೆಗಳಿಂದ ರಾತ್ರಿಯೇ ಆಗಮಿಸಿದ್ದ ಭಕ್ತರು ಬೆಟ್ಟದ ಸಮೀಪ ವಿಶಾಂತ್ರಿ ಪಡೆದರು. ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಮಧ್ಯಾಹ್ನದ ವೇಳೆಗೆ ಭಕ್ತರ ಸಂಖ್ಯೆ ಕಡಿಮೆಯಾಯಿತು.</p>.<p>ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯನಾರಾಯಣ, ಪ್ರಾಂತ ಸಂಯೋಜಕ ಪುಂಡಲಿಕ, ಪ್ರಮುಖರಾದ ವಿನಯ ಪಾಟೀಲ, ದೊಡ್ಡಯ್ಯಸ್ವಾಮಿ, ನರಸಿಂಹ ಮೂರ್ತಿ ಹಾಗೂ ತಿಪ್ಪೆಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ: </strong>ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಭಾನುವಾರ ಹನುಮ ಮಾಲಾ ವಿಸರ್ಜನೆ ಕಾರ್ಯಕ್ರಮ ನಡೆಯಿತು.</p>.<p>ತಾಲ್ಲೂಕು ಆಡಳಿತದ ವತಿಯಿಂದ ಯಾವುದೇ ವ್ಯವಸ್ಥೆ ಮಾಡಿರಲಿಲ್ಲ. ಆದರೂ ವಿವಿಧ ಜಿಲ್ಲೆಗಳಿಂದ ಹನುಮ ಮಾಲಾಧಾರಿಗಳು ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಮಾಲೆ ವಿಸರ್ಜನೆ ಮಾಡಿದರು.</p>.<p>ಜಿಲ್ಲಾಧಿಕಾರಿ ಆದೇಶದಂತೆ ತಾಲ್ಲೂಕು ಆಡಳಿತ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ನಡೆಸಿದರು.</p>.<p>ದೇವಸ್ಥಾನವನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಬೆಳಿಗ್ಗೆಯಿಂದಲೇ ಪಂಚಾಮೃತ ಅಭಿಷೇಕ, ಹೂವಿನ ಅಲಂಕಾರ, ಪವನ, ಹೋಮ–ಹವನ, ಪ್ರವಚನ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.</p>.<p>ಬಳ್ಳಾರಿ, ಗದಗ, ಹುಬ್ಬಳ್ಳಿ, ಬೆಳಗಾವಿ, ಬಾಗಲಕೋಟೆ, ದಾವಣಗೆರೆ, ಚಿತ್ರದುರ್ಗ, ರಾಯಚೂರು ಹಾಗೂ ಯಾದಗಿರಿ ಸೇರಿ ರಾಜ್ಯದ ಬೇರೆ ಬೇರೆ ಭಾಗಗಳಿಂದ ಭಕ್ತರು ಆಗಮಿಸಿದ್ದರು.</p>.<p><strong>16 ಸಿ.ಸಿ ಕ್ಯಾಮೆರಾ ಅಳವಡಿಕೆ :</strong> ಮುಂಜಾಗ್ರತಾ ಕ್ರಮವಾಗಿ ಗರ್ಭಗುಡಿ, ದೇವಸ್ಥಾನದ ಆವರಣ ಹಾಗೂ ಮೆಟ್ಟಿಲು ಸೇರಿ ವಿವಿಧೆಡೆ 16 ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.</p>.<p><strong>10 </strong><strong>ಸಾವಿರಕ್ಕೂ ಹೆಚ್ಚು </strong><strong>ಮಾಲಾಧಾರಿಗಳು: </strong>ಜಿಲ್ಲಾಡಳಿತ ಬೆಟ್ಟದಲ್ಲಿ ಹನುಮ ಮಾಲಾ ವಿಸರ್ಜನೆ ನಿಷೇಧಿಸಿತ್ತು. ಆದರೂ ಹೊರ ಜಿಲ್ಲೆಗಳ 10 ಸಾವಿರಕ್ಕೂ ಹೆಚ್ಚು ಭಕ್ತರು ಆಂಜನೇಯಸ್ವಾಮಿಯ ದರ್ಶನ ಪಡೆದರು. ಮಾಲೆ ವಿಸರ್ಜನೆ ಮಾಡಿದರು.</p>.<p>ವಿವಿಧ ಜಿಲ್ಲೆಗಳಿಂದ ರಾತ್ರಿಯೇ ಆಗಮಿಸಿದ್ದ ಭಕ್ತರು ಬೆಟ್ಟದ ಸಮೀಪ ವಿಶಾಂತ್ರಿ ಪಡೆದರು. ಕೆಲಕಾಲ ನೂಕು ನುಗ್ಗಲು ಉಂಟಾಯಿತು. ಮಧ್ಯಾಹ್ನದ ವೇಳೆಗೆ ಭಕ್ತರ ಸಂಖ್ಯೆ ಕಡಿಮೆಯಾಯಿತು.</p>.<p>ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಸಹ ಸಂಯೋಜಕ ಸೂರ್ಯನಾರಾಯಣ, ಪ್ರಾಂತ ಸಂಯೋಜಕ ಪುಂಡಲಿಕ, ಪ್ರಮುಖರಾದ ವಿನಯ ಪಾಟೀಲ, ದೊಡ್ಡಯ್ಯಸ್ವಾಮಿ, ನರಸಿಂಹ ಮೂರ್ತಿ ಹಾಗೂ ತಿಪ್ಪೆಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>