ಜನಸಂದಣಿ ನಿಯಂತ್ರಿಸಲು ಭಾನುವಾರ ರಾತ್ರಿ 11ರಿಂದಲೇ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಗದಗ, ಬಳ್ಳಾರಿ, ಹೊಸಪೇಟೆ ಮತ್ತು ಕೊಪ್ಪಳ ಜಿಲ್ಲೆಗಳಿಂದ ಭಕ್ತರು ಪಾದಯಾತ್ರೆಯಲ್ಲಿ ಬಂದರು. ಅವರಿಗಾಗಿ ಕೆಲ ಸಂಘಟನೆಯವರು ಅಲ್ಲಲ್ಲಿ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಿದ್ದರು. ಬೆಟ್ಟದ ಹಿಂಭಾಗ ಊಟದ ವ್ಯವಸ್ಥೆ ಮಾಡಲಾಗಿತ್ತು. ಮುಜರಾಯಿ ಖಾತೆ ಸಚಿವ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಸಂಸದ ಸಂಗಣ್ಣ ಕರಡಿ, ಮಾಲಾಧಾರಿಯಾಗಿದ್ದ ಶಾಸಕ ಪರಣ್ಣ ಮುನವಳ್ಳಿ, ಮಾಜಿ ಸಚಿವ ಜನಾರ್ದನ ರೆಡ್ಡಿ ಪೂಜೆ ಸಲ್ಲಿಸಿದರು.