ಶನಿವಾರ ರಾತ್ರಿಯಿಂದಲೇ ಮಾಲೆ ವಿಸರ್ಜನೆ ಆರಂಭವಾಗಿ ಭಾನುವಾರ ಸಂಜೆ ತನಕ ನಡೆಯಿತು. ಬೆಳಗಾವಿ, ಕಲಬುರಗಿ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದಿಂದ ಹನುಮ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಥರಗುಟ್ಟುವ ಚಳಿ, ದಟ್ಟ ಮಂಜಿನ ವಾತಾವರಣದ ನಡುವೆಯೂ ಜಿಲ್ಲೆ ಹಾಗೂ ಸುತ್ತಮುತ್ತಲಿನ ಊರಿನ ಮಾಲಾಧಾರಿಗಳು ತಮ್ಮೂರಿನಿಂದ ಪಾದಯಾತ್ರೆ ಮೂಲಕ ಅಂಜನಾದ್ರಿಗೆ ಬಂದಿದ್ದರು.