<p><strong>ಕನಕಗಿರಿ:</strong> ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧೆಡೆಯ ಹನುಮಂತ ದೇಗುಲಗಳಲ್ಲಿ ಬುಧವಾರ ಶ್ರದ್ಧಾ-ಭಕ್ತಿಯಿಂದ ಹನುಮ ಜಯಂತಿಯನ್ನು ಆಚರಿಸಲಾಯಿತು.</p>.<p>ಇಲ್ಲಿನ ಕನಕಾಚಲಪತಿ ದೇವಸ್ಥಾನ ಪಕ್ಕದಲ್ಲಿರುವ ಸಂಜೀವಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆ ವಾಯುಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು.</p>.<p>ಲೆಕ್ಕಿ ಪತ್ರಿಯ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾ ಮಂಗಳಾರತಿ ಮೂಲಕ ನಾಡಿನ ಸಮೃದ್ಧಿಗೆ ಪ್ರಾರ್ಥಿಸಲಾಯಿತು. ಭಕ್ತರು ದೇವಸ್ಥಾನಕ್ಕೆ ತೆರಳಿ ಹೂ-ಹಣ್ಣು, ಕಾಯಿ ಅರ್ಪಿಸಿದರು. ಮಹಿಳೆಯರು ಬಾಲ ಹನುಮನನ್ನು ಪೂಜಿಸಿ ಸಂಭ್ರಮಿಸಿದರು.</p>.<p>ಈ ವೇಳೆ ಅರ್ಚಕ ಶೇಖಪ್ಪ ಪೂಜಾರ ಮಾತನಾಡಿ, ‘ಪ್ರತಿ ವರ್ಷ ವಿಶಿಷ್ಟವಾಗಿ ಅಲಂಕರಿಸಿ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಹನುಮನಿಗೆ ಹಣ್ಣುಗಳೆಂದರೆ, ಎಲ್ಲಿಲ್ಲದ ಪ್ರೀತಿ. ಹೀಗಾಗಿ ಒಣ ಹಣ್ಣುಗಳಿಂದ ಸಿಂಗರಿಸಿ ಹನುಮನಿಗೆ ಪೂಜೆ ಸಲ್ಲಿಸಲಾಗಿದೆ’ ಎಂದರು.</p>.<p>‘ಏಲಕ್ಕಿ, ಲವಂಗ ಮತ್ತು ಅಂಜೂರು ಹಣ್ಣುಗಳಿಂದ ಸಿಂಗರಿಸಲಾಗಿದೆ. ಈ ರೀತಿಯ ಸಿಂಗರಿಸುವುದರಿಂದ ಹನುಮ ಭಕ್ತರಿಗೆ ಇಷ್ಟಾರ್ಥ ಕರುಣಿಸುತ್ತಾನೆ ಎಂಬುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ’ ಎಂದು ವಿವರಿಸಿದರು.</p>.<p>ಸಮೀಪದ ಕರಡಿಗುಡ್ಡದ ಹನುಮಂತ ದೇವಸ್ಥಾನದಲ್ಲಿ ಹನುಮ ಮಾಲಾಧಾರಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ:</strong> ಪಟ್ಟಣದ ಸೇರಿದಂತೆ ತಾಲ್ಲೂಕಿನ ವಿವಿಧೆಡೆಯ ಹನುಮಂತ ದೇಗುಲಗಳಲ್ಲಿ ಬುಧವಾರ ಶ್ರದ್ಧಾ-ಭಕ್ತಿಯಿಂದ ಹನುಮ ಜಯಂತಿಯನ್ನು ಆಚರಿಸಲಾಯಿತು.</p>.<p>ಇಲ್ಲಿನ ಕನಕಾಚಲಪತಿ ದೇವಸ್ಥಾನ ಪಕ್ಕದಲ್ಲಿರುವ ಸಂಜೀವಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಬೆಳಿಗ್ಗೆ ವಾಯುಪುತ್ರನಿಗೆ ಮಹಾಭಿಷೇಕ, ರುದ್ರಾಭಿಷೇಕ ನೆರವೇರಿಸಲಾಯಿತು.</p>.<p>ಲೆಕ್ಕಿ ಪತ್ರಿಯ ಮೂಲಕ ಪ್ರಾರ್ಥನೆ ಸಲ್ಲಿಸಲಾಯಿತು. ತುಳಸಿ ಅರ್ಚನೆ ಹಾಗೂ ಮಹಾ ಮಂಗಳಾರತಿ ಮೂಲಕ ನಾಡಿನ ಸಮೃದ್ಧಿಗೆ ಪ್ರಾರ್ಥಿಸಲಾಯಿತು. ಭಕ್ತರು ದೇವಸ್ಥಾನಕ್ಕೆ ತೆರಳಿ ಹೂ-ಹಣ್ಣು, ಕಾಯಿ ಅರ್ಪಿಸಿದರು. ಮಹಿಳೆಯರು ಬಾಲ ಹನುಮನನ್ನು ಪೂಜಿಸಿ ಸಂಭ್ರಮಿಸಿದರು.</p>.<p>ಈ ವೇಳೆ ಅರ್ಚಕ ಶೇಖಪ್ಪ ಪೂಜಾರ ಮಾತನಾಡಿ, ‘ಪ್ರತಿ ವರ್ಷ ವಿಶಿಷ್ಟವಾಗಿ ಅಲಂಕರಿಸಿ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಹನುಮನಿಗೆ ಹಣ್ಣುಗಳೆಂದರೆ, ಎಲ್ಲಿಲ್ಲದ ಪ್ರೀತಿ. ಹೀಗಾಗಿ ಒಣ ಹಣ್ಣುಗಳಿಂದ ಸಿಂಗರಿಸಿ ಹನುಮನಿಗೆ ಪೂಜೆ ಸಲ್ಲಿಸಲಾಗಿದೆ’ ಎಂದರು.</p>.<p>‘ಏಲಕ್ಕಿ, ಲವಂಗ ಮತ್ತು ಅಂಜೂರು ಹಣ್ಣುಗಳಿಂದ ಸಿಂಗರಿಸಲಾಗಿದೆ. ಈ ರೀತಿಯ ಸಿಂಗರಿಸುವುದರಿಂದ ಹನುಮ ಭಕ್ತರಿಗೆ ಇಷ್ಟಾರ್ಥ ಕರುಣಿಸುತ್ತಾನೆ ಎಂಬುದು ಇಲ್ಲಿನ ಭಕ್ತರ ನಂಬಿಕೆಯಾಗಿದೆ’ ಎಂದು ವಿವರಿಸಿದರು.</p>.<p>ಸಮೀಪದ ಕರಡಿಗುಡ್ಡದ ಹನುಮಂತ ದೇವಸ್ಥಾನದಲ್ಲಿ ಹನುಮ ಮಾಲಾಧಾರಿಗಳಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>