<p><strong>ಹನುಮಸಾಗರ:</strong> ಇಲ್ಲಿಗೆ ಸಮೀಪದ ಹನುಮನಾಳ ಗ್ರಾಮದಲ್ಲಿ ರೈತರು ಮೆಕ್ಕೆಜೋಳವನ್ನು ಬಿಸಿಲಿಗೆ ಒಣಗಿಸಲು ಊರಿನ ಮುಖ್ಯ ರಸ್ತೆ ಉಪಯೋಗಿಸುತ್ತಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಬಾದಾಮಿಯ ಸ್ಮಾರಕಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ರಸ್ತೆ ಮಧ್ಯ ಮೆಕ್ಕೆಜೋಳದ ತೆನೆಗಳನ್ನು ಹರಡಲಾ ಗುತ್ತಿದೆ. ಅಲ್ಲಿಯೇ ಲಾರಿಗಳನ್ನು ನಿಲ್ಲಿಸಿ ಜೋಳದ ಚೀಲಗಳನ್ನು ತುಂಬಿಕೊಳ್ಳುತ್ತಿರುವ ದೃಶ್ಯಗಳು ಕಾಣಿಸುತ್ತಿವೆ. ಇದರಿಂದಾಗಿ ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. </p>.<p>‘ರಸ್ತೆ ಮಧ್ಯದಲ್ಲಿ ಜೋಳ ಹರಡಿರುವುದರಿಂದ ಸಂಚಾರ ಕಷ್ಟವಾಗುತ್ತಿದೆ. ವೇಗದಲ್ಲಿ ಬರುವ ವಾಹನಗಳು ನಿಯಂತ್ರಣ ತಪ್ಪುವ ಸಾಧ್ಯತೆ ಇದೆ. ಚಾಲಕರು ಇಲ್ಲಿ ಜೀವ ಭಯದಲ್ಲೇ ಸಾಗುತ್ತಿದ್ದಾರೆ’ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತರಿಗೆ ರಸ್ತೆ ಬದಲಾಗಿ ಪರ್ಯಾಯ ಸ್ಥಳದಲ್ಲಿ ಮೆಕ್ಕೆಜೋಳ ಒಣಗಿಸಲು ಅವಕಾಶ ಕಲ್ಪಿಸಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ:</strong> ಇಲ್ಲಿಗೆ ಸಮೀಪದ ಹನುಮನಾಳ ಗ್ರಾಮದಲ್ಲಿ ರೈತರು ಮೆಕ್ಕೆಜೋಳವನ್ನು ಬಿಸಿಲಿಗೆ ಒಣಗಿಸಲು ಊರಿನ ಮುಖ್ಯ ರಸ್ತೆ ಉಪಯೋಗಿಸುತ್ತಿದ್ದು, ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಬಾದಾಮಿಯ ಸ್ಮಾರಕಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ರಸ್ತೆ ಮಧ್ಯ ಮೆಕ್ಕೆಜೋಳದ ತೆನೆಗಳನ್ನು ಹರಡಲಾ ಗುತ್ತಿದೆ. ಅಲ್ಲಿಯೇ ಲಾರಿಗಳನ್ನು ನಿಲ್ಲಿಸಿ ಜೋಳದ ಚೀಲಗಳನ್ನು ತುಂಬಿಕೊಳ್ಳುತ್ತಿರುವ ದೃಶ್ಯಗಳು ಕಾಣಿಸುತ್ತಿವೆ. ಇದರಿಂದಾಗಿ ವಾಹನಗಳು ಸುಗಮವಾಗಿ ಸಂಚರಿಸಲು ಸಾಧ್ಯವಾಗುತ್ತಿಲ್ಲ. </p>.<p>‘ರಸ್ತೆ ಮಧ್ಯದಲ್ಲಿ ಜೋಳ ಹರಡಿರುವುದರಿಂದ ಸಂಚಾರ ಕಷ್ಟವಾಗುತ್ತಿದೆ. ವೇಗದಲ್ಲಿ ಬರುವ ವಾಹನಗಳು ನಿಯಂತ್ರಣ ತಪ್ಪುವ ಸಾಧ್ಯತೆ ಇದೆ. ಚಾಲಕರು ಇಲ್ಲಿ ಜೀವ ಭಯದಲ್ಲೇ ಸಾಗುತ್ತಿದ್ದಾರೆ’ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ರೈತರಿಗೆ ರಸ್ತೆ ಬದಲಾಗಿ ಪರ್ಯಾಯ ಸ್ಥಳದಲ್ಲಿ ಮೆಕ್ಕೆಜೋಳ ಒಣಗಿಸಲು ಅವಕಾಶ ಕಲ್ಪಿಸಬೇಕು’ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>