<p><strong>ಹನುಮಸಾಗರ:</strong> ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಮಾತನಾಡಿ, ‘ಗಣತಿದಾರರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಮಗ್ರ ಹಾಗೂ ನಿಖರ ಮಾಹಿತಿಯನ್ನು ಒದಗಿಸಬೇಕು’ ಎಂದರು.</p>.<p>ಗಣತಿದಾರರು ಜನಗಣತಿ ಕಾರ್ಯವನ್ನು ಕ್ರಮಬದ್ಧ ಹಾಗೂ ಶಿಸ್ತಿನಿಂದ ಮಾಡಬೇಕು. ಗಣತಿ ಕಾರ್ಯ ಆರಂಭಿಸುವಾಗ ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಮೂಲ ರಸ್ತೆಯಿಂದಲೇ ಕಾರ್ಯ ಆರಂಭಿಸಬೇಕು. ಪ್ರತಿ ಮನೆ ಹಾಗೂ ಪ್ರಮುಖ ಗುರುತುಗಳನ್ನು ಸ್ಪಷ್ಟವಾಗಿ ದಾಖಲಿಸುವುದು ಕಡ್ಡಾಯ’ ಎಂದರು.</p>.<p>ಮೇಲ್ವಿಚಾರಕ ಕಿಶನರಾವ್ ಕುಲಕರ್ಣಿ ಮಾತನಾಡಿ, ‘ಆರಂಭದ ಮೂರು ದಿನ ಮ್ಯಾಪಿಂಗ್ ಪ್ರಕ್ರಿಯೆ ನಡೆಯಲಿದೆ. ನಂತರ ಮನೆಮನೆಗೆ ತೆರಳಿ ಗಣತಿ ಕಾರ್ಯ ಕೈಗೊಳ್ಳಲಾಗುವುದು’ ಎಂದರು.</p>.<p>ಮೇಲ್ವಿಚಾರಕ ರಾಮಚಂದ್ರ ಬಡಿಗೇರ, ಹಬೀಬಪಾಶಾ ಮಕಾಂದಾರ, ಹುಲಗಪ್ಪ ಕೊಪ್ಪಳ, ಚಂದ್ರಶೇಖರ ಗುಳೆದ, ಮಹಾಂತಯ್ಯ ಕೊಮಾರಿ, ವೀರೇಶ ಕುರನಾಳ, ಹನುಮೇಶ ಪತ್ತಾರ, ಬಸವರಾಜ ಶಿವಸಿಂಪಿ, ಚಂದಯ್ಯ ಹಿರೇಮಠ, ಮಹಿಬೂಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-35-1887391846</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮಸಾಗರ:</strong> ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೆಡ್ಡಿ ರಾಯನಗೌಡ ಮಾತನಾಡಿ, ‘ಗಣತಿದಾರರು ಮನೆಮನೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸಾರ್ವಜನಿಕರು ಸಮಗ್ರ ಹಾಗೂ ನಿಖರ ಮಾಹಿತಿಯನ್ನು ಒದಗಿಸಬೇಕು’ ಎಂದರು.</p>.<p>ಗಣತಿದಾರರು ಜನಗಣತಿ ಕಾರ್ಯವನ್ನು ಕ್ರಮಬದ್ಧ ಹಾಗೂ ಶಿಸ್ತಿನಿಂದ ಮಾಡಬೇಕು. ಗಣತಿ ಕಾರ್ಯ ಆರಂಭಿಸುವಾಗ ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಮೂಲ ರಸ್ತೆಯಿಂದಲೇ ಕಾರ್ಯ ಆರಂಭಿಸಬೇಕು. ಪ್ರತಿ ಮನೆ ಹಾಗೂ ಪ್ರಮುಖ ಗುರುತುಗಳನ್ನು ಸ್ಪಷ್ಟವಾಗಿ ದಾಖಲಿಸುವುದು ಕಡ್ಡಾಯ’ ಎಂದರು.</p>.<p>ಮೇಲ್ವಿಚಾರಕ ಕಿಶನರಾವ್ ಕುಲಕರ್ಣಿ ಮಾತನಾಡಿ, ‘ಆರಂಭದ ಮೂರು ದಿನ ಮ್ಯಾಪಿಂಗ್ ಪ್ರಕ್ರಿಯೆ ನಡೆಯಲಿದೆ. ನಂತರ ಮನೆಮನೆಗೆ ತೆರಳಿ ಗಣತಿ ಕಾರ್ಯ ಕೈಗೊಳ್ಳಲಾಗುವುದು’ ಎಂದರು.</p>.<p>ಮೇಲ್ವಿಚಾರಕ ರಾಮಚಂದ್ರ ಬಡಿಗೇರ, ಹಬೀಬಪಾಶಾ ಮಕಾಂದಾರ, ಹುಲಗಪ್ಪ ಕೊಪ್ಪಳ, ಚಂದ್ರಶೇಖರ ಗುಳೆದ, ಮಹಾಂತಯ್ಯ ಕೊಮಾರಿ, ವೀರೇಶ ಕುರನಾಳ, ಹನುಮೇಶ ಪತ್ತಾರ, ಬಸವರಾಜ ಶಿವಸಿಂಪಿ, ಚಂದಯ್ಯ ಹಿರೇಮಠ, ಮಹಿಬೂಬ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-35-1887391846</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>