<p><strong>ಕುಕನೂರು:</strong> ‘ತಾಲ್ಲೂಕಿನ ಮಂಗಳೂರು ಗ್ರಾಮದ ಕೆಪಿಎಸ್ಸಿ ಶಾಲೆಯ ವಿದ್ಯಾರ್ಥಿಯ ಪರೀಕ್ಷೆಯ ಅರ್ಜಿಯನ್ನು ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿ ತುಂಬದೆ ಭವಿಷ್ಯ ಹಾಳು ಮಾಡಿದ್ದಾರೆ’ ಎಂದು ಪಾಲಕರು ಆರೋಪಿಸಿದ್ದಾರೆ. </p>.<p>ಎಸ್ಡಿಎಂಸಿ ಸದಸ್ಯ ಶರಣಪ್ಪ ಹ್ಯಾಟಿ ಮಾತನಾಡಿ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಎರಡರಲ್ಲಿ ಪರಶುರಾಮ್ ವಿಶ್ವನಾಥ್ ಕುರಿ ಎಂಬ ವಿದ್ಯಾರ್ಥಿ ₹680 ಪರೀಕ್ಷಾ ಶುಲ್ಕ ಕಟ್ಟಿದ್ದು, ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿ ಅವರು ಬೇಜವಾಬ್ದಾರಿಯಿಂದ ವಿದ್ಯಾರ್ಥಿಯ ಪರೀಕ್ಷಾ ಶುಲ್ಕ ತುಂಬದೇ ಇರುವುದರಿಂದ ಪರಶುರಾಮ್ ಅವರ ಪ್ರವೇಶ ಪತ್ರ ಬಂದಿರುವುದಿಲ್ಲ.</p>.<p>‘ಹನುಮಂತಪ್ಪ ಸರ್ ಅವರು ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ಈ ರೀತಿ ವಿದ್ಯಾರ್ಥಿಯ ಭವಿಷ್ಯ ಹಾಳು ಮಾಡಿದ್ದಲ್ಲದೆ, ಆ ವಿದ್ಯಾರ್ಥಿ ಮತ್ತು ಪಾಲಕರ ಮೇಲೆ ಬೆದರಿಕೆ ಹಾಕಿದ್ದಾರೆ. ಈ ಹಿಂದೆ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡ ಕೊಟ್ಟಿಲ್ಲ. ಈ ಸಂಬಂಧ ಮೇಲಧಿಕಾರಿಗಳು ಹನುಮಂತಪ್ಪ ಸರ್ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಪ್ರವೇಶ ಪತ್ರ ಕೊಡದಿದ್ದಕ್ಕೆ ವಿದ್ಯಾರ್ಥಿಯ ಪಾಲಕ ವಿಶ್ವನಾಥ್ ಹಾಗೂ ಪರಶುರಾಮ್ ಅವರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿ ಅವರನ್ನು ಪ್ರಜಾವಾಣಿ ಸಂಪರ್ಕಿಸಿದಾಗ ಕರೆ ಸ್ಥಗಿತಗೊಳಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ ಪ್ರತಿಕ್ರಿಯಿಸಿ, ‘ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿಯವರಿಗೆ ವಿದ್ಯಾರ್ಥಿ ಪರಶುರಾಮನ ಪರೀಕ್ಷಾ ಶುಲ್ಕ ತುಂಬದಿರುವುದಕ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು:</strong> ‘ತಾಲ್ಲೂಕಿನ ಮಂಗಳೂರು ಗ್ರಾಮದ ಕೆಪಿಎಸ್ಸಿ ಶಾಲೆಯ ವಿದ್ಯಾರ್ಥಿಯ ಪರೀಕ್ಷೆಯ ಅರ್ಜಿಯನ್ನು ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿ ತುಂಬದೆ ಭವಿಷ್ಯ ಹಾಳು ಮಾಡಿದ್ದಾರೆ’ ಎಂದು ಪಾಲಕರು ಆರೋಪಿಸಿದ್ದಾರೆ. </p>.<p>ಎಸ್ಡಿಎಂಸಿ ಸದಸ್ಯ ಶರಣಪ್ಪ ಹ್ಯಾಟಿ ಮಾತನಾಡಿ, ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಎರಡರಲ್ಲಿ ಪರಶುರಾಮ್ ವಿಶ್ವನಾಥ್ ಕುರಿ ಎಂಬ ವಿದ್ಯಾರ್ಥಿ ₹680 ಪರೀಕ್ಷಾ ಶುಲ್ಕ ಕಟ್ಟಿದ್ದು, ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿ ಅವರು ಬೇಜವಾಬ್ದಾರಿಯಿಂದ ವಿದ್ಯಾರ್ಥಿಯ ಪರೀಕ್ಷಾ ಶುಲ್ಕ ತುಂಬದೇ ಇರುವುದರಿಂದ ಪರಶುರಾಮ್ ಅವರ ಪ್ರವೇಶ ಪತ್ರ ಬಂದಿರುವುದಿಲ್ಲ.</p>.<p>‘ಹನುಮಂತಪ್ಪ ಸರ್ ಅವರು ಒಬ್ಬ ಜವಾಬ್ದಾರಿಯುತ ವ್ಯಕ್ತಿಯಾಗಿ ಈ ರೀತಿ ವಿದ್ಯಾರ್ಥಿಯ ಭವಿಷ್ಯ ಹಾಳು ಮಾಡಿದ್ದಲ್ಲದೆ, ಆ ವಿದ್ಯಾರ್ಥಿ ಮತ್ತು ಪಾಲಕರ ಮೇಲೆ ಬೆದರಿಕೆ ಹಾಕಿದ್ದಾರೆ. ಈ ಹಿಂದೆ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕೂಡ ಕೊಟ್ಟಿಲ್ಲ. ಈ ಸಂಬಂಧ ಮೇಲಧಿಕಾರಿಗಳು ಹನುಮಂತಪ್ಪ ಸರ್ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಪ್ರವೇಶ ಪತ್ರ ಕೊಡದಿದ್ದಕ್ಕೆ ವಿದ್ಯಾರ್ಥಿಯ ಪಾಲಕ ವಿಶ್ವನಾಥ್ ಹಾಗೂ ಪರಶುರಾಮ್ ಅವರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.</p>.<p>ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿ ಅವರನ್ನು ಪ್ರಜಾವಾಣಿ ಸಂಪರ್ಕಿಸಿದಾಗ ಕರೆ ಸ್ಥಗಿತಗೊಳಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ನಿಂಗಪ್ಪ ಪ್ರತಿಕ್ರಿಯಿಸಿ, ‘ಮುಖ್ಯ ಶಿಕ್ಷಕ ಹನುಮಂತಪ್ಪ ಕುರಿಯವರಿಗೆ ವಿದ್ಯಾರ್ಥಿ ಪರಶುರಾಮನ ಪರೀಕ್ಷಾ ಶುಲ್ಕ ತುಂಬದಿರುವುದಕ್ಕೆ ಶೋಕಾಸ್ ನೋಟಿಸ್ ನೀಡಲಾಗಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>