ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕನೂರು: ಆರೋಗ್ಯ ಅರಿವು ಕಾರ್ಯಕ್ರಮ

Published 23 ಮೇ 2023, 13:36 IST
Last Updated 23 ಮೇ 2023, 13:36 IST
ಅಕ್ಷರ ಗಾತ್ರ

ಕುಕನೂರು: ಜನನ ವೇಳೆ ಮಕ್ಕಳ ಮರಣ ಪ್ರಮಾಣಕ್ಕೆ ಕಡಿವಾಣ ಹಾಕಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಹತ್ವದ ಯೋಜನೆ ರೂಪಿಸಿವೆ. ಈ ಹಿನ್ನೆಲೆಯಲ್ಲಿ ಗರ್ಭಿಣಿಯರು ಸರ್ಕಾರಿ ಯೋಜನೆಯ ಸದುಪಯೋಗಕ್ಕೆ ಮುಂದಾಗಿ ಮಕ್ಕಳ ಮರಣ ಪ್ರಮಾಣ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಆಡಳಿತ ವೈದ್ಯಾಧಿಕಾರಿ ಸಿ.ಎಸ್ ಹಿರೇಮಠ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಯಿ ಹಾಗೂ ಮಕ್ಕಳ ಮರಣ ಪ್ರಮಾಣ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹೀಗಾಗಿ ಆಸ್ಪತ್ರೆ ಹೆರಿಗೆಯನ್ನು ಕಡ್ಡಾಯಗೊಳಿಸಬೇಕು. ಆಸ್ಪತ್ರೆ ಹೆರಿಗೆಯಿಂದಾಗಿ ಅರ್ಹ ಫಲಾನುಭವಿಗಳಿಗೆ ಪ್ರಸೂತಿ ಆರೈಕೆ, ಹೆರಿಗೆ ಭತ್ಯೆ, ಮಡಿಲು ಕಿಟ್ಟು ಮುಂತಾದ ಸೌಲಭ್ಯಗಳು ದೊರೆಯುತ್ತವೆ. ಈ ಕಾರಣಕ್ಕಾಗಿ ಮಹಿಳೆಯರು ಆಸ್ಪತ್ರೆ ಹೆರಿಗೆಯನ್ನು ಕಡ್ಡಾಯಗೊಳಿಸಬೇಕೆಂದು ಮನವಿ ಮಾಡಿದರು.

ಗರ್ಭಿಣಿಯರು ರಕ್ತಹೀನತೆಯಿಂದ ಹೊರ ಬರಬೇಕಾದರೆ ಪೌಷ್ಟಿಕ ಆಹಾರ ಸೇವನೆಗೆ ಅದ್ಯತೆ ನೀಡಬೇಕು. ತಾಯಿ ಹಾಗೂ ಮಗುವಿನ ಆರೈಕೆಯಲ್ಲಿ ಕುಟುಂಬದ ಪಾತ್ರ ಮಹತ್ವದ್ದು. ಹೆರಿಗೆ ಸಮಯದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡುವುದಕ್ಕಾಗಿಯೇ ಸರ್ಕಾರ ಆಸ್ಪತ್ರೆ ಹೆರಿಗೆಯನ್ನು ಕಡ್ಡಾಯಗೊಳಿಸಿದೆ. ಜತೆಗೆ ಗರ್ಭಿಣಿಯರು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಆರೋಗ್ಯಯುತ ಹೆರಿಗೆಗೆ ಮುಂದಾಗಬೇಕು ಎಂದರು.

ಗಂಗಮ್ಮ, ಗೀತಾ ಅರಳಿಕಟ್ಟಿ, ಪ್ರವೀಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT