ಮುಖ್ಯಮಂತ್ರಿಗೆ ಸಲಹೆ ಕೊಡುವವರು ಅವರ ಆಪ್ತ ಶಾಸಕರು ಜಿಲ್ಲೆಯಲ್ಲಿದ್ದಾರೆ. ಎಲ್ಲರೂ ಸೇರಿ ಮಾತನಾಡಬೇಕು. ಕೆಲವರಷ್ಟೇ ಮಾತನಾಡಿ ಹಲವರು ಸುಮ್ಮನಾದರೆ ಜೀವನ ಪೂರ್ತಿ ನೋವು ಅನುಭವಿಸಬೇಕಾಗುತ್ತದೆ.
ಅಲ್ಲಮಪ್ರಭು ಬೆಟ್ಟದೂರು ವೇದಿಕೆಯ ಪ್ರಧಾನ ಸಂಚಾಲಕ
ಮುಖ್ಯಮಂತ್ರಿ ಸೂಚನೆ ಬಳಿಕ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಕಾರ್ಯ ಸ್ಥಗಿತವಾಗಿದೆ. ಸದ್ಯಕ್ಕೆ ಅಲ್ಲಿ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ.
ಡಾ. ಸುರೇಶ ಇಟ್ನಾಳ ಜಿಲ್ಲಾಧಿಕಾರಿ
ಕಾರ್ಖಾನೆಗಳು ವಿಸ್ತರಣೆಯಾದರೆ ಆ ವಿಷಾನಿಲ ಬದುಕು ಹಾಳು ಮಾಡುತ್ತದೆ. ಬದುಕನ್ನು ಬಣ್ಣಗೆಡಿಸುವ ಕೆಲಸ ನಡೆಯುತ್ತಿದೆ. ನಾವು ಕಾರ್ಖಾನೆಗಳ ವಿರೋಧಿಗಳಲ್ಲ. ಆರೋಗ್ಯ ಜೀವ ತೆಗೆಯುವ ಯಾವ ಕಾರ್ಖಾನೆಗಳು ಬೇಡ.