ಹೀಗೆ ಇರಲಿ: ನೀರು, ಮಜ್ಜಿಗೆ ಮತ್ತು ಎಳನೀರು ಕುಡಿಯಬಹುದು. ಬೆಚ್ಚಗಿನ ಮಸಾಲೆ ರಹಿತ ಶುದ್ಧ-ಸಾತ್ವಿಕ ಆಹಾರ ಸೇವಿಸಬೇಕು. ಗಾಳಿಯಾಡುವಂಥ ಪಾದರಕ್ಷೆಗಳನ್ನು ಧರಿಸಬೇಕು. ವ್ಯಕ್ತಿಯು ತೊದಲು ಮಾತು ಅಥವಾ ಅರ್ಥರಹಿತವಾಗಿ ಬಡ-ಬಡಿಸಿದಲ್ಲಿ ಕೂಡಲೇ ನೆರಳಿನ ಸ್ಥಳಕ್ಕೆ ಸ್ಥಳಾಂತರಿಸಬೇಕು. ಚರ್ಮ ಕೆಂಪಾದರೆ, ಬೆವರು ಕಡಿಮೆಯಾದರೆ, ದೇಹದ ಉಷ್ಣತೆ ಜಾಸ್ತಿಯಾದರೆ, ಉಸಿರಾಟದ ತೊಂದರೆಯಾದರೆ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕು.