ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾವತಿ| ಬೆಟ್ಟ ಏರುವ ವೇಳೆ ಹೃದಯಾಘಾತ: ಯುವಕ ಸಾವು

Last Updated 29 ಮಾರ್ಚ್ 2023, 6:17 IST
ಅಕ್ಷರ ಗಾತ್ರ

ಗಂಗಾವತಿ: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟ ಏರುವಾಗ ಯುವಕನೊಬ್ಬನಿಗೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಕುಷ್ಟಗಿ ತಾಲ್ಲೂಕಿನ ವಣಗೇರಿ ಗ್ರಾಮದ ವೀರೇಶ ನಿಂಗಪ್ಪ(24) ಮೃತ ಯುವಕ.

ಯುವಕ ವೀರೇಶ, ನಾಲ್ವರು ಗೆಳೆಯರ ಜತೆ ಅಂಜನಾದ್ರಿ ದರ್ಶನಕ್ಕೆ ಬಂದಿದ್ದರು. ಮಧ್ಯಾಹ್ನ ಬೆಟ್ಟ ಏರುವಾಗ ಮೂರ್ಛೆ ಬಂದು ಮೆಟ್ಟಿಲು ಮೇಲೆ ಬಿದ್ದರು. ಆಗ ಜತೆಗಿದ್ದವರು ಮತ್ತು ದೇವಸ್ಥಾನ ಸಿಬ್ಬಂದಿ ಆಟೊ ಮೂಲಕ ಆನೆಗೊಂದಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ನಂತರ ‘ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಗೆ ದಾಖಲಿಸುವಾಗ ಮೃತಪಟ್ಟಿದ್ದಾರೆ’ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT