ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು

ಗಂಗಾವತಿ: ನಗರದ ಕಂಪ್ಲಿ ರಸ್ತೆಯಲ್ಲಿರುವ ಉದ್ಭವ ತಾಯಮ್ಮದೇವಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ₹25 ಸಾವಿರ ನೀಡಲಾಯಿತು.
ಸಂಸ್ಥೆಯ ಯೋಜನಾಧಿಕಾರಿ ಬಾಲಕೃಷ್ಣ ಮಾತನಾಡಿ,‘ತಾಯಮ್ಮದೇವಿ ದೇವಸ್ಥಾನ ಜೀರ್ಣೋದ್ಧಾರ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಆಡಳಿತ ಮಂಡಳಿಯವರು ಜೀರ್ಣೋದ್ಧಾರಕ್ಕೆ ಆರ್ಥಿಕ ಸಹಾಯ ಕೇಳಿದ್ದರು. ಆದ್ದರಿಂದ ಸಂಸ್ಥೆ ವತಿಯಿಂದ ₹25 ಸಾವಿರ ನೀಡಲಾಗಿದೆ’ ಎಂದರು.
ನಗರಸಭೆ ಸದಸ್ಯ ನೀಲಕಂಠ ಕಟ್ಟಿಮನಿ, ಯರಿಯಪ್ಪ ಹೊಸಳ್ಳಿ, ನಾಗೇಶ್ವರರಾವ್, ರಾಜು, ರವಿ, ಶರಣಪ್ಪ ಕಟ್ಟಿಮನಿ, ಹನುಮಂತಪ್ಪ ಪೂಜಾರಿ ಹಾಗೂ ಮುಕ್ಕಣ್ಣ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.