ಮಲ್ಲಮ್ಮಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು. ರೆಡ್ಡಿ ಕಾಲೊನಿ, ಸಹಕಾರಿ ಸಂಘದ ಕಚೇರಿ, ಮೋಚಿ ಹಾಗೂ ಭೋವಿ ಕಾಲೊನಿಯಿಂದ ರಾಜಬೀದಿ ಮೂಲಕ ಕನಕಾಚಲಪತಿ ದೇಗುಲದ ವರೆಗೆ ಸಡಗರ, ಸಂಭ್ರಮದಿಂದ ಮೆರವಣಿಗೆ ನಡೆಯಿತು.
ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಲ್ಲಮ್ಮ ವೃತ್ತ ತಲುಪಿತು. ಮಹಿಳೆಯರು ಕುಂಭ, ಕಳಸ ಹೊತ್ತು ಭಾಗವಹಿಸಿದ್ದರು. ತಾಷ ಮೇಳ ಗಮನ ಸೆಳೆಯಿತು.
ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, ಹೇಮರಡ್ಡಿ ಮಲ್ಲಮ್ಮ ಕುಟುಂಬದಿಂದ ಎಷ್ಟೇ ಶೋಷಣೆಗೆ ಒಳಗಾಗಿದ್ದರೂ ಸಹ ತನ್ನ ತಾಳ್ಮೆ ಹಾಗೂ ಭಕ್ತಿಯಿಂದ ಇಡೀ ಕುಟುಂಬವನ್ನು ಉತ್ತಮವಾಗಿ ನಡೆಸಿ ಮಹಿಳೆಯರ ಕಣ್ಮಣಿಯಾಗಿದ್ದಾರೆ ಎಂದು ಹೇಳಿದರು. ಹೇಮರೆಡ್ಡಿ ಮಲ್ಲಮ್ಮಳು ಇಡೀ ಮಹಿಳೆಯರಿಗೆ ಮುಕುಟಮಣಿಯಾಗಿದ್ದಾರೆ’ ಎಂದರು.
ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಬಸವೇಶ್ವರ ಹಾಗೂ ಹೇಮರಡ್ಡಿ ಮಲ್ಲಮ್ಮ ಜಯಂತಿ ಯಲ್ಲಿ ಇಒ ವೀರೇಂದ್ರಕುಮಾರ, ಸಹಾಯಕ ನಿರ್ದೇಶಕ ಚಂದ್ರಶೇಖರ ಕಂದಕೂರು, ಕೊಟ್ರಯ್ಯ ಇತರರು ಹಾಜರಿದ್ದರು.