<p>ಕನಕಗಿರಿ: ಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ಸೋಮವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ರವೀಂದ್ರ ಸಜ್ಜನ್ ಮಾತನಾಡಿ,‘ಹೇಮರಡ್ಡಿ ಮಲ್ಲಮ್ಮನವರು ಶೋಷಣೆಗೆ ಒಳಗಾಗಿದ್ದರು. ತಾಳ್ಮೆ ಹಾಗೂ ಭಕ್ತಿಯಿಂದ ಇಡೀ ಕುಟುಂಬ ನಡೆಸಿ ಮಹಿಳೆಯರ ಕಣ್ಮಣಿಯಾಗಿದ್ದರು’ ಎಂದರು.</p>.<p>ಸದಸ್ಯರಾದ ಮಂಜುನಾಥರೆಡ್ಡಿ ಮಾದಿನಾಳ, ಹುಲಗಪ್ಪ ವಾಲೇಕಾರ, ಸುಭಾಸ ಕಂದಕೂರು, ಪ್ರಮುಖರಾದ ಇಬ್ರಾಯಿಂಸಾಬ ಹಾಗೂ ಪ್ರಕಾಶ ಹಾದಿಮನಿ ಇದ್ದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ಸಮಾಜಕ್ಕೆ ಮೌಲ್ಯಗಳನ್ನು ಬೋಧಿಸಿದ ಸಂತರು, ಶರಣರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು’ ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್, ಸದಸ್ಯ ಶರಣಬಸಪ್ಪ ಭತ್ತದ ಅವರು ಮಾತನಾಡಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯರಾದ ಮಂಜುನಾಥರೆಡ್ಡಿ ಮಾದಿನಾಳ, ಖಾಜಾಸಾಬ ಗುರಿಕಾರ ಹಾಗೂ ಇತರರು ಇದ್ದರು.</p>.<p>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಿರ್ದೇಶಕರಾದ ಶೇಖರಪ್ಪ ಭಾವಿಕಟ್ಟಿ, ಸಗರಪ್ಪ ಕಂಪ್ಲಿ, ಸಿಬ್ಬಂದಿ ಮಂಜುನಾಥರೆಡ್ಡಿ ಎಚ್ ಮಾದಿನಾಳ, ಶಕ್ಷಾವಲಿ ಬಿಳಿಕುದುರಿ ಹಾಗೂ ವೀರೇಶ ಇದ್ದರು.</p>.<p>ಸಮೀಪದ ನವಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಜಯಂತಿಯಲ್ಲಿ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ,<br />ಗ್ರಾ.ಪಂ. ಸದಸ್ಯ ಕಾಡನಗೌಡ, ಪ್ರಮುಖರಾದ ಮಲ್ಲಿಕಾರ್ಜುನ ಬಳಗಾನೂರು ಹಾಗೂ ನಿಂಗಪ್ಪ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕನಕಗಿರಿ: ಪಟ್ಟಣ ಸೇರಿ ವಿವಿಧ ಗ್ರಾಮಗಳಲ್ಲಿ ಸೋಮವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.</p>.<p>ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ರವೀಂದ್ರ ಸಜ್ಜನ್ ಮಾತನಾಡಿ,‘ಹೇಮರಡ್ಡಿ ಮಲ್ಲಮ್ಮನವರು ಶೋಷಣೆಗೆ ಒಳಗಾಗಿದ್ದರು. ತಾಳ್ಮೆ ಹಾಗೂ ಭಕ್ತಿಯಿಂದ ಇಡೀ ಕುಟುಂಬ ನಡೆಸಿ ಮಹಿಳೆಯರ ಕಣ್ಮಣಿಯಾಗಿದ್ದರು’ ಎಂದರು.</p>.<p>ಸದಸ್ಯರಾದ ಮಂಜುನಾಥರೆಡ್ಡಿ ಮಾದಿನಾಳ, ಹುಲಗಪ್ಪ ವಾಲೇಕಾರ, ಸುಭಾಸ ಕಂದಕೂರು, ಪ್ರಮುಖರಾದ ಇಬ್ರಾಯಿಂಸಾಬ ಹಾಗೂ ಪ್ರಕಾಶ ಹಾದಿಮನಿ ಇದ್ದರು.</p>.<p>ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರವಿ ಅಂಗಡಿ ಮಾತನಾಡಿ,‘ಸಮಾಜಕ್ಕೆ ಮೌಲ್ಯಗಳನ್ನು ಬೋಧಿಸಿದ ಸಂತರು, ಶರಣರನ್ನು ಒಂದು ಸಮಾಜಕ್ಕೆ ಸೀಮಿತಗೊಳಿಸಬಾರದು’ ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅಧ್ಯಕ್ಷ ರವೀಂದ್ರ ಸಜ್ಜನ್, ಸದಸ್ಯ ಶರಣಬಸಪ್ಪ ಭತ್ತದ ಅವರು ಮಾತನಾಡಿದರು.</p>.<p>ಪಟ್ಟಣ ಪಂಚಾಯಿತಿ ಸದಸ್ಯರಾದ ಮಂಜುನಾಥರೆಡ್ಡಿ ಮಾದಿನಾಳ, ಖಾಜಾಸಾಬ ಗುರಿಕಾರ ಹಾಗೂ ಇತರರು ಇದ್ದರು.</p>.<p>ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಿರ್ದೇಶಕರಾದ ಶೇಖರಪ್ಪ ಭಾವಿಕಟ್ಟಿ, ಸಗರಪ್ಪ ಕಂಪ್ಲಿ, ಸಿಬ್ಬಂದಿ ಮಂಜುನಾಥರೆಡ್ಡಿ ಎಚ್ ಮಾದಿನಾಳ, ಶಕ್ಷಾವಲಿ ಬಿಳಿಕುದುರಿ ಹಾಗೂ ವೀರೇಶ ಇದ್ದರು.</p>.<p>ಸಮೀಪದ ನವಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಜಯಂತಿಯಲ್ಲಿ ಸಂಘದ ಅಧ್ಯಕ್ಷ ಭೀಮನಗೌಡ ಹರ್ಲಾಪುರ,<br />ಗ್ರಾ.ಪಂ. ಸದಸ್ಯ ಕಾಡನಗೌಡ, ಪ್ರಮುಖರಾದ ಮಲ್ಲಿಕಾರ್ಜುನ ಬಳಗಾನೂರು ಹಾಗೂ ನಿಂಗಪ್ಪ ನಾಯಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>