ಗಂಗಾವತಿ: ನಗರದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಸೋಮವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು.
ಉಪ ತಹಶೀಲ್ದಾರ್ ವಿ.ಎಚ್.ಹೊರಪೇಟೆ ಮಾತನಾಡಿ,‘ಆದರ್ಶಗಳನ್ನು ತಿಳಿದುಕೊಳ್ಳಲಿ ಎನ್ನುವ ಉದ್ದೇಶದಿಂದ ಶರಣರ, ಸಂತರ ಜಯಂತಿ ಆಚರಣೆ ಮಾಡಲಾಗುತ್ತದೆ. ಆದರೆ ಸದ್ಯ ಜಯಂತಿಗಳು ಕೇವಲ ಆಚರಣೆಗೆ ಸೀಮಿತವಾಗಿವೆ’ ಎಂದು ವಿಷಾದಿಸಿದರು.