ಅಂಜನಾದ್ರಿ ಪರ್ವತ ಹಿಂದೂಗಳ ಪವಿತ್ರ ಧಾರ್ಮಿಕ ಶ್ರದ್ಧಾ ಕೇಂದ್ರವಾಗಿದ್ದು, ದೇಶ ಹಾಗೂ ವಿದೇಶಗಳಿಂದ ಭಕ್ತರು ದರ್ಶನ ಪಡೆಯಲು ಬರುತ್ತಾರೆ. ಈ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದೆ. ಕಾಯಿ, ಕರ್ಪೂರ, ಹಣ್ಣುಗಳು ಸೇರಿದಂತೆ ಅನೇಕ ಪೂಜಾ ಸಾಮಗ್ರಿಗಳನ್ನು ಮತ್ತು ಹೋಟೆಲ್ಗಳು ಅಲ್ಲಿವೆ. ಇವುಗಳಲ್ಲಿ ವ್ಯಾಪಾರ ನಡೆಸಲು ಹಿಂದೂಗಳಿಗೆ ಮಾತ್ರ ಅವಕಾಶ ನೀಡಬೇಕು. ಇಂಥ ಪವಿತ್ರ ಕ್ಷೇತ್ರದಲ್ಲಿ ಮುಸ್ಲಿಂ ಹಾಗೂ ಕ್ರೈಸ್ತ ಧರ್ಮದವರಿಗೆ ಅವಕಾಶ ಕೊಡಬಾರದು ಎಂದು ಆಗ್ರಹಿಸಿದ್ದಾರೆ.