<p><strong>ಯಲಬುರ್ಗಾ</strong>: ‘ಹಿಂದೂಗಳು ಒಗ್ಗೂಡಿ ದೇಶದ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಮುಂದಾಗಬೇಕು. ಇಲ್ಲದಿದ್ದರೆ ಹಿಂದೂ ಸಮಾಜ ಸಂಪೂರ್ಣ ಅವಸಾನದತ್ತ ಸಾಗಬೇಕಾಗುತ್ತದೆ. ಪ್ರತಿ ಹಿಂದೂ ಒಂದು ಎಂಬ ಪರಿಕಲ್ಪನೆಯಲ್ಲಿ ಒಗ್ಗೂಡಬೇಕಾಗಿದೆ’ ಎಂದು ಹಿಂದೂ ಸಮಾಜದ ಮುಖಂಡ ಕೃಷ್ಣಾನಂದ ಹೇಳಿದರು.</p>.<p>ಪಟ್ಟಣದ ಮೊಗ್ಗಿಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಹಿಂದೂ ಸಮಾಜೋತ್ಸವ ಹಾಗೂ ಶೋಭಾಯಾತ್ರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ಗೂ ಹಿಂದೂ ಸಂಘಟನೆಗೂ ಸಂಬಂಧವಿಲ್ಲ. ಹಿಂದೂ ಸಮಾಜದವರು ಒಗ್ಗೂಡಿ ಸಂಘಟಿತರಾಗಿ ಹಿಂದೂಗಳು ಮತ್ತೆ ತಮ್ಮತನವನ್ನು ಉಳಿಸಿಕೊಂಡು ಅತ್ತಿತ್ವವನ್ನು ಕಂಡುಕೊಳ್ಳಬೇಕಾಗಿದೆ’ ಎಂದರು.</p>.<p>‘ಹಿಂದೂಗಳನ್ನು ಮತಾಂತರಕ್ಕೆ ಒಳಪಡಿಸಿ, ನಮ್ಮ ಬಲವನ್ನು ಕ್ಷೀಣಿಸುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೂ ಸ್ಥಾನದಲ್ಲಿ ಹಿಂದೂಗಳದ್ದೇ ದೊಡ್ಡ ಶಕ್ತಿ ಇದ್ದರೂ ವಾಸ್ತವದಲ್ಲಿ ಬೇರೆನೇ ಆಗುತ್ತಿದೆ. ನಿರ್ಲಕ್ಷ್ಯ ಮುಂದುವರಿದರೆ ಸಂಪೂರ್ಣ ವಿನಾಶವಾಗುವುದರಲ್ಲಿ ಎರಡು ಮಾತಿಲ್ಲ’ ಎಂದರು.</p>.<p>‘ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಯೋಧರನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಮಹಾತ್ಮರ ಮತ್ತು ಮಹನೀಯರ ಜಯಂತಿಗಳನ್ನು ಜಾತಿಗೆ ಸೀಮಿತಗೊಳಿಸದೇ ಅವರ ವ್ಯಕ್ತಿತ್ವವನ್ನು ಅನುಸರಿಸಿ, ದೇಶಕ್ಕೆ ನೀಡಿದ ಅವರ ಕೊಡುಗೆಯನ್ನು ಸ್ಮರಿಸಿ ಪ್ರತಿಯೊಬ್ಬರೂ ಗೌರವಿಸುವುದನ್ನು ರೂಢಿಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.</p>.<p>‘ನಮ್ಮ ಭಾಷೆ, ನೆಲ, ಜಲ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರುವುದು, ಸ್ವದೇಶಿ ವಸ್ತುಗಳನ್ನು ಬಳಸಿಕೊಳ್ಳುವ ಮೂಲಕ ನಮ್ಮ ದೇಶವನ್ನು ಅಭಿವೃದ್ಧಿಯತ್ತ ಸಾಗುವಂತೆ ಮಾಡುವುದು. ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಒಲವು ತೋರದೇ ದೇಶಿ ಸಂಸ್ಕೃತಿಯನ್ನು ಹೆಚ್ಚೆಚ್ಚು ಅನುಸರಣೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ನಾವು ಅಸ್ತಿತ್ವದಲ್ಲಿ ಇರಬೇಕಾದರೆ ಹಿಂದುತ್ವದ ಅಡಿಯಲ್ಲಿ ಸಾಗಿದರೆ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಹಿಂದೂಗಳು ಎಂದು ಕರೆಯಿಸಿಕೊಳ್ಳುವ ಪ್ರತಿಯೊಂದು ಸಮಾಜದವರು ಒಗ್ಗೂಡಿ ಅಸ್ತಿತ್ವ ಉಳಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮಾಜಿ ಸಚಿವ ಹಾಲಪ್ಪ ಆಚಾರ, ಬಸವಲಿಂಗಪ್ಪ ಭೂತೆ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು. ಸಂಚಾಲಕ ಸುರೇಶಗೌಡ ಶಿವನಗೌಡ ಸ್ವಾಗತಿಸಿದರು. ಲೋಕೇಶ ಲಮಾಣಿ ನಿರೂಪಿಸಿದರು. ದೊಡ್ಡಯ್ಯ ಗುರುವಿನ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ</strong>: ‘ಹಿಂದೂಗಳು ಒಗ್ಗೂಡಿ ದೇಶದ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಮುಂದಾಗಬೇಕು. ಇಲ್ಲದಿದ್ದರೆ ಹಿಂದೂ ಸಮಾಜ ಸಂಪೂರ್ಣ ಅವಸಾನದತ್ತ ಸಾಗಬೇಕಾಗುತ್ತದೆ. ಪ್ರತಿ ಹಿಂದೂ ಒಂದು ಎಂಬ ಪರಿಕಲ್ಪನೆಯಲ್ಲಿ ಒಗ್ಗೂಡಬೇಕಾಗಿದೆ’ ಎಂದು ಹಿಂದೂ ಸಮಾಜದ ಮುಖಂಡ ಕೃಷ್ಣಾನಂದ ಹೇಳಿದರು.</p>.<p>ಪಟ್ಟಣದ ಮೊಗ್ಗಿಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಹಿಂದೂ ಸಮಾಜೋತ್ಸವ ಹಾಗೂ ಶೋಭಾಯಾತ್ರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆರ್ಎಸ್ಎಸ್ಗೂ ಹಿಂದೂ ಸಂಘಟನೆಗೂ ಸಂಬಂಧವಿಲ್ಲ. ಹಿಂದೂ ಸಮಾಜದವರು ಒಗ್ಗೂಡಿ ಸಂಘಟಿತರಾಗಿ ಹಿಂದೂಗಳು ಮತ್ತೆ ತಮ್ಮತನವನ್ನು ಉಳಿಸಿಕೊಂಡು ಅತ್ತಿತ್ವವನ್ನು ಕಂಡುಕೊಳ್ಳಬೇಕಾಗಿದೆ’ ಎಂದರು.</p>.<p>‘ಹಿಂದೂಗಳನ್ನು ಮತಾಂತರಕ್ಕೆ ಒಳಪಡಿಸಿ, ನಮ್ಮ ಬಲವನ್ನು ಕ್ಷೀಣಿಸುವ ಪ್ರಯತ್ನಗಳು ನಡೆಯುತ್ತಿವೆ. ಹಿಂದೂ ಸ್ಥಾನದಲ್ಲಿ ಹಿಂದೂಗಳದ್ದೇ ದೊಡ್ಡ ಶಕ್ತಿ ಇದ್ದರೂ ವಾಸ್ತವದಲ್ಲಿ ಬೇರೆನೇ ಆಗುತ್ತಿದೆ. ನಿರ್ಲಕ್ಷ್ಯ ಮುಂದುವರಿದರೆ ಸಂಪೂರ್ಣ ವಿನಾಶವಾಗುವುದರಲ್ಲಿ ಎರಡು ಮಾತಿಲ್ಲ’ ಎಂದರು.</p>.<p>‘ಮಕ್ಕಳಿಗೆ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಯೋಧರನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಮಹಾತ್ಮರ ಮತ್ತು ಮಹನೀಯರ ಜಯಂತಿಗಳನ್ನು ಜಾತಿಗೆ ಸೀಮಿತಗೊಳಿಸದೇ ಅವರ ವ್ಯಕ್ತಿತ್ವವನ್ನು ಅನುಸರಿಸಿ, ದೇಶಕ್ಕೆ ನೀಡಿದ ಅವರ ಕೊಡುಗೆಯನ್ನು ಸ್ಮರಿಸಿ ಪ್ರತಿಯೊಬ್ಬರೂ ಗೌರವಿಸುವುದನ್ನು ರೂಢಿಸಿಕೊಳ್ಳಬೇಕಾಗಿದೆ’ ಎಂದು ಹೇಳಿದರು.</p>.<p>‘ನಮ್ಮ ಭಾಷೆ, ನೆಲ, ಜಲ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರುವುದು, ಸ್ವದೇಶಿ ವಸ್ತುಗಳನ್ನು ಬಳಸಿಕೊಳ್ಳುವ ಮೂಲಕ ನಮ್ಮ ದೇಶವನ್ನು ಅಭಿವೃದ್ಧಿಯತ್ತ ಸಾಗುವಂತೆ ಮಾಡುವುದು. ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಒಲವು ತೋರದೇ ದೇಶಿ ಸಂಸ್ಕೃತಿಯನ್ನು ಹೆಚ್ಚೆಚ್ಚು ಅನುಸರಣೆಗೆ ಮುಂದಾಗಬೇಕು’ ಎಂದು ಸಲಹೆ ನೀಡಿದರು.</p>.<p>ಶ್ರೀಧರ ಮುರಡಿ ಹಿರೇಮಠದ ಬಸವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ‘ನಾವು ಅಸ್ತಿತ್ವದಲ್ಲಿ ಇರಬೇಕಾದರೆ ಹಿಂದುತ್ವದ ಅಡಿಯಲ್ಲಿ ಸಾಗಿದರೆ ಮಾತ್ರ ಸಾಧ್ಯವಿದೆ. ಈ ನಿಟ್ಟಿನಲ್ಲಿ ಹಿಂದೂಗಳು ಎಂದು ಕರೆಯಿಸಿಕೊಳ್ಳುವ ಪ್ರತಿಯೊಂದು ಸಮಾಜದವರು ಒಗ್ಗೂಡಿ ಅಸ್ತಿತ್ವ ಉಳಿಸಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಮಾಜಿ ಸಚಿವ ಹಾಲಪ್ಪ ಆಚಾರ, ಬಸವಲಿಂಗಪ್ಪ ಭೂತೆ ಸೇರಿ ಅನೇಕ ಗಣ್ಯರು ಭಾಗವಹಿಸಿದ್ದರು. ಸಂಚಾಲಕ ಸುರೇಶಗೌಡ ಶಿವನಗೌಡ ಸ್ವಾಗತಿಸಿದರು. ಲೋಕೇಶ ಲಮಾಣಿ ನಿರೂಪಿಸಿದರು. ದೊಡ್ಡಯ್ಯ ಗುರುವಿನ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>