<p><strong>ಮುನಿರಾಬಾದ್</strong>: ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 50ರ ಹಿಟ್ನಾಳ ಟೋಲ್ಗೇಟ್ ಹತ್ತಿರ ಮಂಗಳವಾರ ಬೆಳಗಿನ ಜಾವ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಎರಡು ಹಸು ಮೃತಪಟ್ಟಿದ್ದು, ಎರಡು ಎತ್ತುಗಳು ಗಾಯಗೊಂಡಿವೆ.</p>.<p>ಬೆಂಗಳೂರು ನೋಂದಣಿ ಸಂಖ್ಯೆ ಹೊಂದಿರುವ ಲಾಂಗ್ ಫ್ಲ್ಯಾಟ್ ಫಾರ್ಮ್ ಟ್ರಕ್ (ಎಲ್ಪಿಟಿ) ವಾಹನದಲ್ಲಿ ಸುಮಾರು 15ಕ್ಕೂ ಹೆಚ್ಚು ಜಾನುವಾರು ಸಾಗಿಸಲಾಗುತ್ತಿತ್ತು.</p>.<p>ಟೋಲ್ಗೇಟ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಟ್ರಕ್ ಚಾಲಕ ಬಾಬಾ ಮೆಹಬೂಬ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಳಿದ ಹಸುಗಳನ್ನು ಕೊಪ್ಪಳದ ಗೋಶಾಲೆಗೆ ಕಳುಹಿಸಲಾಗಿದೆ ಎಂದು ಗ್ರಾಮೀಣ ಸಿಪಿಐ ಡಿ. ಸುರೇಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸ್ಥಳೀಯರು ಮತ್ತು ಹಸುಗಳನ್ನು ರಕ್ಷಿಸಿದ ಹಿಟ್ನಾಳ ಗ್ರಾಮಸ್ಥರು ಹೇಳುವಂತೆ, ‘ಒಟ್ಟು 20 ಜಾನುವಾರು ಟ್ರಕ್ನಲ್ಲಿ ಸಾಗಿಸಲಾಗುತ್ತಿತ್ತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಅದರಲ್ಲಿ 4 ಹಸುಗಳು ಉಸಿರು ಕಟ್ಟಿ ಮೃತಪಟ್ಟಿವೆ. ಉಳಿದವುಗಳನ್ನು ರಕ್ಷಣೆ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.</p>.<p><strong>ಮನವಿ</strong>: ಗಾಯಗೊಂಡ ಹಸುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗೋಶಾಲೆಗೆ ಕಳುಹಿಸಬೇಕು ಎಂದು ಹಿಟ್ನಾಳ ಗ್ರಾಮದ ಮುಖಂಡ ಪ್ರದೀಪ ಪಲ್ಲೇದ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನಿರಾಬಾದ್</strong>: ಇಲ್ಲಿನ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ 50ರ ಹಿಟ್ನಾಳ ಟೋಲ್ಗೇಟ್ ಹತ್ತಿರ ಮಂಗಳವಾರ ಬೆಳಗಿನ ಜಾವ ಜಾನುವಾರು ಸಾಗಿಸುತ್ತಿದ್ದ ಟ್ರಕ್ ಪಲ್ಟಿಯಾಗಿ ಎರಡು ಹಸು ಮೃತಪಟ್ಟಿದ್ದು, ಎರಡು ಎತ್ತುಗಳು ಗಾಯಗೊಂಡಿವೆ.</p>.<p>ಬೆಂಗಳೂರು ನೋಂದಣಿ ಸಂಖ್ಯೆ ಹೊಂದಿರುವ ಲಾಂಗ್ ಫ್ಲ್ಯಾಟ್ ಫಾರ್ಮ್ ಟ್ರಕ್ (ಎಲ್ಪಿಟಿ) ವಾಹನದಲ್ಲಿ ಸುಮಾರು 15ಕ್ಕೂ ಹೆಚ್ಚು ಜಾನುವಾರು ಸಾಗಿಸಲಾಗುತ್ತಿತ್ತು.</p>.<p>ಟೋಲ್ಗೇಟ್ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಟ್ರಕ್ ಚಾಲಕ ಬಾಬಾ ಮೆಹಬೂಬ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉಳಿದ ಹಸುಗಳನ್ನು ಕೊಪ್ಪಳದ ಗೋಶಾಲೆಗೆ ಕಳುಹಿಸಲಾಗಿದೆ ಎಂದು ಗ್ರಾಮೀಣ ಸಿಪಿಐ ಡಿ. ಸುರೇಶ್ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p>.<p>ಮುನಿರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಸ್ಥಳೀಯರು ಮತ್ತು ಹಸುಗಳನ್ನು ರಕ್ಷಿಸಿದ ಹಿಟ್ನಾಳ ಗ್ರಾಮಸ್ಥರು ಹೇಳುವಂತೆ, ‘ಒಟ್ಟು 20 ಜಾನುವಾರು ಟ್ರಕ್ನಲ್ಲಿ ಸಾಗಿಸಲಾಗುತ್ತಿತ್ತು. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಲಾರಿ ಪಲ್ಟಿಯಾಗಿದೆ. ಅದರಲ್ಲಿ 4 ಹಸುಗಳು ಉಸಿರು ಕಟ್ಟಿ ಮೃತಪಟ್ಟಿವೆ. ಉಳಿದವುಗಳನ್ನು ರಕ್ಷಣೆ ಮಾಡಿದ್ದೇವೆ’ ಎಂದು ತಿಳಿಸಿದ್ದಾರೆ.</p>.<p><strong>ಮನವಿ</strong>: ಗಾಯಗೊಂಡ ಹಸುಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗೋಶಾಲೆಗೆ ಕಳುಹಿಸಬೇಕು ಎಂದು ಹಿಟ್ನಾಳ ಗ್ರಾಮದ ಮುಖಂಡ ಪ್ರದೀಪ ಪಲ್ಲೇದ ಅವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>