<p><strong>ಕೊಪ್ಪಳ</strong>: ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಕೊಪ್ಪಳದಲ್ಲಿ ಆಯೋಜನೆ ಆಗಿದ್ದ ಕುಟುಂಬದವರ ಜನ್ಮದಿನದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಯಲಬುರ್ಗಾ ತಾಲ್ಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಸ್ಕಾರ್ಪಿಯೋ ವಾಹನ ನಜ್ಜುಗುಜ್ಜಾಗಿದೆ.</p>.<p>ವಾಹನದಲ್ಲಿ ಒಟ್ಟು ಒಂಬತ್ತು ಜನ ಇದ್ದರು.</p>.<p>ನಿವೃತ್ತ ಸೈನಿಕ ಶರಣಪ್ಪ ಕೊಪ್ಪದ ಅವರ ಮೊಮ್ಮಗಳ ಜನ್ಮದಿನದ ಸಮಾರಂಭದಲ್ಲಿ ಪಾಲ್ಗೊಂಡು ವಾಪಸ್ ಹೋಗುವಾಗ ಈ ಘಟನೆ ಜರುಗಿದೆ.</p>.<p>ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62), ಗಿರಿಜಮ್ಮ (45), ಶಾಂತಮ್ಮ (32), ಪಾರ್ವತಮ್ಮ(32), ಕಸ್ತೂರಿ (22) ಮೃತಪಟ್ಟವರು.</p>.<p>ಪಲ್ಲವಿ (28), ಪುಟ್ಟರಾಜ (7),ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಗಂಭೀರವಾಗಿ ಪಾಲ್ಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ</strong></p>.<p><strong>ಕೊಪ್ಪಳ</strong>: ಜಿಲ್ಲೆಯ ಭಾನಾಪುರ ಸಮೀಪ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಟ್ ಆ್ಯಂಡ್ ರನ್ ಮಾಡಿದ ವಾಹನ ಸವಾರನ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷಿ ಗಿರಿ ಹೇಳಿದರು.</p>.<p><br />ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ್ಮ ದಿನಾಚರಣೆ ಸಂಬಂಧ ಬಿನ್ನಾಳ ಗ್ರಾಮದಿಂದ 9 ಜನರು ಕೊಪ್ಪಳಕ್ಕೆ ಬಂದಿದ್ದರು. ಮರಳಿ ಸ್ವ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ವಾಹನದಲ್ಲಿ ಒಟ್ಟು 9 ಜನ ಇದ್ದರು. ಈ ಪೈಕಿ ಐದು ಜನ ಮೃತ ಪಟ್ಟಿದ್ದಾರೆ. ಭಾನಾಪುರ ಬಳಿಯ ಗೊಂಬೆ ತಯಾರಿಕಾ ಫ್ಯಾಕ್ಟರಿ ಹತ್ತಿರ ಘಟನೆ ನಡೆದಿದೆ. ಗಾಯಗೊಂಡ ನಾಲ್ಕು ಜನರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಈ ಪೈಕಿ ಒಬ್ಬರು ಗಂಭೀರವಾಗಿದ್ದಾರೆ ಎಂದರು.</p>.<p>ಮೃತರು ಪೊಲೀಸ್ ಇಲಾಖೆಯ ಡಿಎಆರ್ ಸಿಬ್ಬಂದಿಯ ಸಂಬಂಧಿ ಆಗಿದ್ದಾರೆ. ಸ್ಕಾರ್ಪಿಯೊಗೆ ಲಾರಿ ಅಥವಾ ಟಿಪ್ಪರ್ ಗುದ್ದಿ ಹೋಗಿರುವ ಶಂಕೆಯಿದೆ.</p>.<p>ಟೋಲ್ ಗೇಟ್ ಹಾಗೂ ಉಳಿದ ಜಿಲ್ಲೆಯ ನೈಟ್ ಪೊಲೀಸ್ ಸಿಬ್ಬಂದಿಗೂ ವಾಹನ ಪತ್ತೆಗೆ ಸೂಚನೆ ನೀಡಿದ್ದೇವೆ. ಸಮಗ್ರ ತನಿಖೆಯದ ಈ ಅಪಘಾತ ಪ್ರಕರಣದಲ್ಲಿ ಯಾರದ್ದು ತಪ್ಪಿದೆ ಎಂಬುದು ಎಲ್ಲ ರೀತಿಯ ತನಿಖೆಯಿಂದ ತಿಳಿದು ಬರಲಿದೆ ಎಂದರು.</p>.<p><strong>ಜಿಲ್ಲಾಸ್ಪತ್ರೆಗೆ ಭೇಟಿ:</strong> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಜಿಲ್ಲೆಯ ಕುಕನೂರು ತಾಲ್ಲೂಕಿನ ಭಾನಾಪುರ ಬಳಿ ಶನಿವಾರ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಕೊಪ್ಪಳದಲ್ಲಿ ಆಯೋಜನೆ ಆಗಿದ್ದ ಕುಟುಂಬದವರ ಜನ್ಮದಿನದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಯಲಬುರ್ಗಾ ತಾಲ್ಲೂಕಿನ ಬಿನ್ನಾಳ ಗ್ರಾಮಕ್ಕೆ ವಾಪಸ್ ಹೋಗುವಾಗ ಅವಘಡ ಸಂಭವಿಸಿದೆ. ಸ್ಕಾರ್ಪಿಯೋ ವಾಹನ ನಜ್ಜುಗುಜ್ಜಾಗಿದೆ.</p>.<p>ವಾಹನದಲ್ಲಿ ಒಟ್ಟು ಒಂಬತ್ತು ಜನ ಇದ್ದರು.</p>.<p>ನಿವೃತ್ತ ಸೈನಿಕ ಶರಣಪ್ಪ ಕೊಪ್ಪದ ಅವರ ಮೊಮ್ಮಗಳ ಜನ್ಮದಿನದ ಸಮಾರಂಭದಲ್ಲಿ ಪಾಲ್ಗೊಂಡು ವಾಪಸ್ ಹೋಗುವಾಗ ಈ ಘಟನೆ ಜರುಗಿದೆ.</p>.<p>ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62), ಗಿರಿಜಮ್ಮ (45), ಶಾಂತಮ್ಮ (32), ಪಾರ್ವತಮ್ಮ(32), ಕಸ್ತೂರಿ (22) ಮೃತಪಟ್ಟವರು.</p>.<p>ಪಲ್ಲವಿ (28), ಪುಟ್ಟರಾಜ (7),ಚಾಲಕ ಹರ್ಷವರ್ಧನ (35) ಹಾಗೂ ಭೂಮಿಕಾ (5) ಗಂಭೀರವಾಗಿ ಪಾಲ್ಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.</p>.<p><strong>ಚೆಕ್ ಪೋಸ್ಟ್, ಟೋಲ್ ಗಳ ಮೇಲೆ ನಿಗಾ</strong></p>.<p><strong>ಕೊಪ್ಪಳ</strong>: ಜಿಲ್ಲೆಯ ಭಾನಾಪುರ ಸಮೀಪ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಟ್ ಆ್ಯಂಡ್ ರನ್ ಮಾಡಿದ ವಾಹನ ಸವಾರನ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಕ್ಷಿ ಗಿರಿ ಹೇಳಿದರು.</p>.<p><br />ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ್ಮ ದಿನಾಚರಣೆ ಸಂಬಂಧ ಬಿನ್ನಾಳ ಗ್ರಾಮದಿಂದ 9 ಜನರು ಕೊಪ್ಪಳಕ್ಕೆ ಬಂದಿದ್ದರು. ಮರಳಿ ಸ್ವ ಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ನಡೆದಿದೆ. ವಾಹನದಲ್ಲಿ ಒಟ್ಟು 9 ಜನ ಇದ್ದರು. ಈ ಪೈಕಿ ಐದು ಜನ ಮೃತ ಪಟ್ಟಿದ್ದಾರೆ. ಭಾನಾಪುರ ಬಳಿಯ ಗೊಂಬೆ ತಯಾರಿಕಾ ಫ್ಯಾಕ್ಟರಿ ಹತ್ತಿರ ಘಟನೆ ನಡೆದಿದೆ. ಗಾಯಗೊಂಡ ನಾಲ್ಕು ಜನರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಈ ಪೈಕಿ ಒಬ್ಬರು ಗಂಭೀರವಾಗಿದ್ದಾರೆ ಎಂದರು.</p>.<p>ಮೃತರು ಪೊಲೀಸ್ ಇಲಾಖೆಯ ಡಿಎಆರ್ ಸಿಬ್ಬಂದಿಯ ಸಂಬಂಧಿ ಆಗಿದ್ದಾರೆ. ಸ್ಕಾರ್ಪಿಯೊಗೆ ಲಾರಿ ಅಥವಾ ಟಿಪ್ಪರ್ ಗುದ್ದಿ ಹೋಗಿರುವ ಶಂಕೆಯಿದೆ.</p>.<p>ಟೋಲ್ ಗೇಟ್ ಹಾಗೂ ಉಳಿದ ಜಿಲ್ಲೆಯ ನೈಟ್ ಪೊಲೀಸ್ ಸಿಬ್ಬಂದಿಗೂ ವಾಹನ ಪತ್ತೆಗೆ ಸೂಚನೆ ನೀಡಿದ್ದೇವೆ. ಸಮಗ್ರ ತನಿಖೆಯದ ಈ ಅಪಘಾತ ಪ್ರಕರಣದಲ್ಲಿ ಯಾರದ್ದು ತಪ್ಪಿದೆ ಎಂಬುದು ಎಲ್ಲ ರೀತಿಯ ತನಿಖೆಯಿಂದ ತಿಳಿದು ಬರಲಿದೆ ಎಂದರು.</p>.<p><strong>ಜಿಲ್ಲಾಸ್ಪತ್ರೆಗೆ ಭೇಟಿ:</strong> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>