ವಿಜಯನಗರ ಕಾಲುವೆ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮ, ವಿಜಯನಗರ ಕಾಲುವೆಗಳ ಆಧುನಿಕರಣ ಯೋಜನೆ, ಮುನಿರಾಬಾದ್ನ ನಂ-1 ತುಂಗಾಭದ್ರ ಜಲಾಶಯ ವಿಭಾಗ ಜಂಟಿಯಾಗಿ ಕಾಮಗಾರಿ ನಡೆಸುತ್ತಿದೆ. ಈ ವೇಳೆ ವಿಜಯನಗರ ಕಾಲುವೆ ಯೋಜನೆಯ ಸಂವಹನ ಮತ್ತು ದಾಖಲಾತಿ ತಜ್ಞ ಮಲ್ಲಿಕಾರ್ಜುನ ಹೊಸಪಾಳ್ಯ ಅವರು ಶಾಸನ ಇರುವ ಬಗ್ಗೆ ರಾಜ್ಯ ಪುರಾತತ್ತ್ವ ಸಂಗ್ರಹಾಲಯಗಳು ಪರಂಪರೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದಕ್ಕೂ ಮೊದಲು ವನ್ಯಜೀವಿ ಸಂಶೋಧಕ ಡಾ.ಸಮದ್ ಕೊಟ್ಟೂರು ಇದನ್ನು ನೋಡಿದ್ದರು.