<p><strong>ಕನಕಗಿರಿ (ಕೊಪ್ಪಳ): </strong>ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚನೆ ಮಾಡಲಾಗಿದೆ. ಘಟನೆಯಲ್ಲಿ ಭಾಗಿಯಾದ ನಿಜವಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹೇಳಿದರು.</p>.<p><strong>ಇದನ್ನೂ ಓದಿ</strong>:<a href="https://www.prajavani.net/district/koppal/clash-in-hulihydara-village-villagers-left-town-due-to-the-fear-of-arrest-962616.html" itemprop="url">ಹುಲಿಹೈದರ ಗ್ರಾಮದಲ್ಲಿ ಘರ್ಷಣೆ| ಬಂಧನ ಭೀತಿಯಿಂದ ಊರು ತೊರೆದ ಗ್ರಾಮಸ್ಥರು! </a></p>.<p>ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಘಟನೆಗೆ ಮೂಲ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ. ಅಮಾಯಕರನ್ನು ಬಂಧಿಸುವುದಿಲ್ಲ. ಗ್ರಾಮಸ್ಥರು ವಿನಾಕಾರಣ ಆತಂಕಕ್ಕೆ ಒಳಗಾಗುವುದು ಬೇಡ. ವಶಕ್ಕೆ ತೆಗೆದುಕೊಂಡವರಲ್ಲಿ ತಪ್ಪಿತಸ್ಥರು ಇಲ್ಲದಿದ್ದರೆ ವಾಪಸ್ ಕಳುಹಿಸಲಾಗುವುದು’ ಎಂದರು.</p>.<p>ದಢೇಸೂಗೂರು ಭೇಟಿ: ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಪಾಷವಲಿ ಮಾಳಿಗದ್ದಿ, ಯಂಕಪ್ಪ ತಳವಾರ ಹಾಗೂ ಗಾಯಗೊಂಡಿರುವ ಧರ್ಮಣ್ಣ ಅವರ ಮನೆಗೆ ಶಾಸಕ ಬಸವರಾಜ ದಢೇಸೂಗೂರು ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಪಾಷವಲಿ ಅವರ ಮನೆಗೆ ತೆರಳಿದಾಗ ಕುಟುಂಬದವರು ಬಿಕ್ಕಿಬಿಕ್ಕಿ ಅತ್ತರು.</p>.<p>‘ಹೂ, ಹಣ್ಣು ತರಲು ಹೋದವನನ್ನು ಕೊಂದು ಹಾಕಿದ್ದಾರೆ. ಪೊಲೀಸ್ ಪಹರೆ ಇದ್ದಿದ್ದರೆ ಘಟನೆ ನಡೆಯುತ್ತಿರಲಿಲ್ಲ. ನನ್ನ ಮಗ ಜೀವಂತವಾಗಿ ಇರುತ್ತಿದ್ದ. ನಮಗೆ ಬಂದ ಪರಿಸ್ಥಿತಿ ಯಾರಿಗೂ ಬರುವುದು ಬೇಡ’ ಎಂದು ಪಾಷವಲಿ ತಾಯಿ ಹೊನ್ನುರುಬೀ, ಸಹೋದರಿಯರಾದ ಜಾಹೀರಾಬಿ, ರಶೀದ್ ಕಣ್ಣೀರಾದರು.</p>.<p>‘ಕೈ, ಕಾಲು ಮಾತ್ರ ಮುರಿದಿದ್ದರೆ ಸಹೋದರ ಬದುಕುತ್ತಿದ್ದ. ಮೂರು ತಿಂಗಳ ಕೂಸು ಇದೆ, ಮುಂದೆ ತಂದೆ ಎಲ್ಲಿ ಅಂತ ಕೇಳಿದರೆ ಏನು ಉತ್ತರಿಸಬೇಕು’ ಎಂದು ಅವರ ಸಹೋದರಿ ರಶೀದ್ ಭಾವುಕರಾದರು.</p>.<p>ಯಂಕಪ್ಪ ಮನೆಗೆ ತೆರಳಿದ್ದಾಗ ಅವರ ಮನೆಗೆ ಬಾಗಿಲು ಹಾಕಲಗಿತ್ತು. ಗಾಯಾಳು ಧರ್ಮಣ್ಣ ಅವರ ಜತೆಗೆ ಹುಬ್ಬಳ್ಳಿಗೆ ತೆರಳಿರುವ ಸಂಬಂಧಿಕರ ಜತೆಗೆ ದೂರವಾಣಿಯಲ್ಲಿ ಮಾತನಾಡಿ ಆರೋಗ್ಯ ವಿಚಾರಿಸಿದರು.</p>.<p>ನಂತರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿದ ಶಾಸಕರು ‘ಕೆಟ್ಟ ಗಳಿಗೆಯಲ್ಲಿ ಘಟನೆ ನಡೆದಿದೆ. ಅಮಾಯಕರನ್ನು ಬಂಧಿಸದಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದರು.</p>.<p>ಕೂಲಿ ಕೆಲಸವಿಲ್ಲದೆ ಗ್ರಾಮದ ಕುಟುಂಬಕ್ಕೆ ಆಹಾರ ಧಾನ್ಯಗಳ ಕಿಟ್ ವಿತರಿಸುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು.</p>.<p>ಡಿವೈಎಸ್ ಪಿ ರುದ್ರೇಶ ಉಜ್ಜಿನಕೊಪ್ಪ, ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಮಹಾಂತೇಶ ಸಜ್ಜನ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗ್ಯಾನಪ್ಪ ನಾಯಕ ಸೇರಿದಂತೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ (ಕೊಪ್ಪಳ): </strong>ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು ಆರು ತಂಡಗಳನ್ನು ರಚನೆ ಮಾಡಲಾಗಿದೆ. ಘಟನೆಯಲ್ಲಿ ಭಾಗಿಯಾದ ನಿಜವಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಹೇಳಿದರು.</p>.<p><strong>ಇದನ್ನೂ ಓದಿ</strong>:<a href="https://www.prajavani.net/district/koppal/clash-in-hulihydara-village-villagers-left-town-due-to-the-fear-of-arrest-962616.html" itemprop="url">ಹುಲಿಹೈದರ ಗ್ರಾಮದಲ್ಲಿ ಘರ್ಷಣೆ| ಬಂಧನ ಭೀತಿಯಿಂದ ಊರು ತೊರೆದ ಗ್ರಾಮಸ್ಥರು! </a></p>.<p>ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ‘ಘಟನೆಗೆ ಮೂಲ ಕಾರಣವನ್ನು ಪತ್ತೆ ಹಚ್ಚಲಾಗುತ್ತಿದೆ. ಅಮಾಯಕರನ್ನು ಬಂಧಿಸುವುದಿಲ್ಲ. ಗ್ರಾಮಸ್ಥರು ವಿನಾಕಾರಣ ಆತಂಕಕ್ಕೆ ಒಳಗಾಗುವುದು ಬೇಡ. ವಶಕ್ಕೆ ತೆಗೆದುಕೊಂಡವರಲ್ಲಿ ತಪ್ಪಿತಸ್ಥರು ಇಲ್ಲದಿದ್ದರೆ ವಾಪಸ್ ಕಳುಹಿಸಲಾಗುವುದು’ ಎಂದರು.</p>.<p>ದಢೇಸೂಗೂರು ಭೇಟಿ: ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಪಾಷವಲಿ ಮಾಳಿಗದ್ದಿ, ಯಂಕಪ್ಪ ತಳವಾರ ಹಾಗೂ ಗಾಯಗೊಂಡಿರುವ ಧರ್ಮಣ್ಣ ಅವರ ಮನೆಗೆ ಶಾಸಕ ಬಸವರಾಜ ದಢೇಸೂಗೂರು ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಪಾಷವಲಿ ಅವರ ಮನೆಗೆ ತೆರಳಿದಾಗ ಕುಟುಂಬದವರು ಬಿಕ್ಕಿಬಿಕ್ಕಿ ಅತ್ತರು.</p>.<p>‘ಹೂ, ಹಣ್ಣು ತರಲು ಹೋದವನನ್ನು ಕೊಂದು ಹಾಕಿದ್ದಾರೆ. ಪೊಲೀಸ್ ಪಹರೆ ಇದ್ದಿದ್ದರೆ ಘಟನೆ ನಡೆಯುತ್ತಿರಲಿಲ್ಲ. ನನ್ನ ಮಗ ಜೀವಂತವಾಗಿ ಇರುತ್ತಿದ್ದ. ನಮಗೆ ಬಂದ ಪರಿಸ್ಥಿತಿ ಯಾರಿಗೂ ಬರುವುದು ಬೇಡ’ ಎಂದು ಪಾಷವಲಿ ತಾಯಿ ಹೊನ್ನುರುಬೀ, ಸಹೋದರಿಯರಾದ ಜಾಹೀರಾಬಿ, ರಶೀದ್ ಕಣ್ಣೀರಾದರು.</p>.<p>‘ಕೈ, ಕಾಲು ಮಾತ್ರ ಮುರಿದಿದ್ದರೆ ಸಹೋದರ ಬದುಕುತ್ತಿದ್ದ. ಮೂರು ತಿಂಗಳ ಕೂಸು ಇದೆ, ಮುಂದೆ ತಂದೆ ಎಲ್ಲಿ ಅಂತ ಕೇಳಿದರೆ ಏನು ಉತ್ತರಿಸಬೇಕು’ ಎಂದು ಅವರ ಸಹೋದರಿ ರಶೀದ್ ಭಾವುಕರಾದರು.</p>.<p>ಯಂಕಪ್ಪ ಮನೆಗೆ ತೆರಳಿದ್ದಾಗ ಅವರ ಮನೆಗೆ ಬಾಗಿಲು ಹಾಕಲಗಿತ್ತು. ಗಾಯಾಳು ಧರ್ಮಣ್ಣ ಅವರ ಜತೆಗೆ ಹುಬ್ಬಳ್ಳಿಗೆ ತೆರಳಿರುವ ಸಂಬಂಧಿಕರ ಜತೆಗೆ ದೂರವಾಣಿಯಲ್ಲಿ ಮಾತನಾಡಿ ಆರೋಗ್ಯ ವಿಚಾರಿಸಿದರು.</p>.<p>ನಂತರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿದ ಶಾಸಕರು ‘ಕೆಟ್ಟ ಗಳಿಗೆಯಲ್ಲಿ ಘಟನೆ ನಡೆದಿದೆ. ಅಮಾಯಕರನ್ನು ಬಂಧಿಸದಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದರು.</p>.<p>ಕೂಲಿ ಕೆಲಸವಿಲ್ಲದೆ ಗ್ರಾಮದ ಕುಟುಂಬಕ್ಕೆ ಆಹಾರ ಧಾನ್ಯಗಳ ಕಿಟ್ ವಿತರಿಸುವಂತೆ ಜಿಲ್ಲಾಧಿಕಾರಿ ಅವರಿಗೆ ತಿಳಿಸಿದರು.</p>.<p>ಡಿವೈಎಸ್ ಪಿ ರುದ್ರೇಶ ಉಜ್ಜಿನಕೊಪ್ಪ, ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಮಹಾಂತೇಶ ಸಜ್ಜನ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಗ್ಯಾನಪ್ಪ ನಾಯಕ ಸೇರಿದಂತೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>