<div><div><div><div><strong>ಕನಕಗಿರಿ: </strong>ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಈಚೆಗೆ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರ ಮನೆಗೆ ಶುಕ್ರವಾರ ಸತ್ಯ ಶೋಧನಾ ತಂಡದ ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದರು.</div><div></div><div>ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಭೆ ನಡೆಸಬೇಕು. ಎಲ್ಲರೂ ಮೊದಲಿನಂತೆ ಬದುಕುವ ಹಾಗೆ ಆಗಬೇಕು. ಮೃತ ವ್ಯಕ್ತಿಯ ಪ್ರತಿ ಕುಟುಂಬಕ್ಕೆ ತಕ್ಷಣ ₹50 ಲಕ್ಷ ಹಾಗೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಧರ್ಮಣ್ಣ ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಸದಸ್ಯರು ಆಗ್ರಹಿಸಿದರು.</div><div></div><div>ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಮಾಯಕರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರಕರಣದ ಕುರಿದಂತೆ ನಿಜಾಂಶವನ್ನು ಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.</div><div></div><div>ಸದಸ್ಯರಾದ ಅರವಿಂದ ನಾರಾಯಣ, ಮಹಮ್ಮದ್ ಆಫೀಪ್, ಮಹಾಂತೇಶ ಕೊತಬಾಳ, ಜೆ. ಭಾರಧ್ವಾಜ್, ಬಸವರಾಜ ಶೀಲವಂತರ, ಕ್ಲಿಫ್ಟನ್, ಕರಿಯಪ್ಪ ಗುಡಿಮನಿ, ಡಿ.ಎಲ್. ಪೂಜಾರ, ಆನಂದ ಭಂಡಾರಿ, ಕನಕಪ್ಪ ದೊಡ್ಡಮನಿ, ಕೆಂಚಪ್ಪ, ಲೋಕೇಶ, ಪಂಪಾಪತಿ, ಪಾಮಣ್ಣ ಅರಳಿಗನೂರು ಇದ್ದರು.</div></div></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<div><div><div><div><strong>ಕನಕಗಿರಿ: </strong>ತಾಲ್ಲೂಕಿನ ಹುಲಿಹೈದರ ಗ್ರಾಮದಲ್ಲಿ ಈಚೆಗೆ ನಡೆದ ಗುಂಪು ಘರ್ಷಣೆಯಲ್ಲಿ ಮೃತಪಟ್ಟ ಹಾಗೂ ಗಾಯಗೊಂಡವರ ಮನೆಗೆ ಶುಕ್ರವಾರ ಸತ್ಯ ಶೋಧನಾ ತಂಡದ ಸದಸ್ಯರು ಭೇಟಿ ನೀಡಿ ಸಾಂತ್ವನ ಹೇಳಿದರು.</div><div></div><div>ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸಭೆ ನಡೆಸಬೇಕು. ಎಲ್ಲರೂ ಮೊದಲಿನಂತೆ ಬದುಕುವ ಹಾಗೆ ಆಗಬೇಕು. ಮೃತ ವ್ಯಕ್ತಿಯ ಪ್ರತಿ ಕುಟುಂಬಕ್ಕೆ ತಕ್ಷಣ ₹50 ಲಕ್ಷ ಹಾಗೂ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಧರ್ಮಣ್ಣ ಅವರ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಸದಸ್ಯರು ಆಗ್ರಹಿಸಿದರು.</div><div></div><div>ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಮಾಯಕರನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಪ್ರಕರಣದ ಕುರಿದಂತೆ ನಿಜಾಂಶವನ್ನು ಲಿಖಿತ ರೂಪದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.</div><div></div><div>ಸದಸ್ಯರಾದ ಅರವಿಂದ ನಾರಾಯಣ, ಮಹಮ್ಮದ್ ಆಫೀಪ್, ಮಹಾಂತೇಶ ಕೊತಬಾಳ, ಜೆ. ಭಾರಧ್ವಾಜ್, ಬಸವರಾಜ ಶೀಲವಂತರ, ಕ್ಲಿಫ್ಟನ್, ಕರಿಯಪ್ಪ ಗುಡಿಮನಿ, ಡಿ.ಎಲ್. ಪೂಜಾರ, ಆನಂದ ಭಂಡಾರಿ, ಕನಕಪ್ಪ ದೊಡ್ಡಮನಿ, ಕೆಂಚಪ್ಪ, ಲೋಕೇಶ, ಪಂಪಾಪತಿ, ಪಾಮಣ್ಣ ಅರಳಿಗನೂರು ಇದ್ದರು.</div></div></div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>