ಈ ದೇವಾಲಯ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟಿದೆ. ಪ್ರತಿ ತಿಂಗಳು ಕೋಟಿಗಟ್ಟಲೆ ದೇಣಿಗೆ, ಬಂಗಾರ, ಬೆಳ್ಳಿ ಭಕ್ತರಿಂದ ಸಂಗ್ರಹವಾಗುತ್ತದೆ. ಕರ್ನಾಟಕವಲ್ಲದೆ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡಿನಿಂದಲೂ ಲಕ್ಷಾಂತರ ಭಕ್ತರು ಬರುತ್ತಾರೆ. ಹೀಗಾಗಿ ದೇವಸ್ಥಾನದ ಸುತ್ತಲೂ ಭಕ್ತರಿಗಾಗಿ ಹಲವಾರು ಸೌಲಭ್ಯಗಳನ್ನು ಕಲ್ಪಿಸಲು ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ.