ಮೊಹರಂ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಅಲ್ಲಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು. ಅದರಲ್ಲಿ ಘಟನೆಯ ಬಹಳಷ್ಟು ದೃಶ್ಯಾವಳಿಗಳು ದಾಖಲಾಗಿವೆ. ಅವುಗಳ ಆಧಾರದ ಮೇಲೆ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಬಂಧನದ ಭೀತಿಯಿಂದ ಊರು ತೊರೆದಿರುವ ಹಲವರ ಪತ್ತೆಗಾಗಿ ಪೊಲೀಸರು ಅಕ್ಕಪಕ್ಕದ ಜಿಲ್ಲೆಗಳು ಹಾಗೂ ನೆರೆ ರಾಜ್ಯಗಳಲ್ಲಿ ಹುಡುಕಾಟ ನಡೆಸಿದ್ದಾರೆ.