<p><strong>ಕೊಪ್ಪಳ: </strong>ತಾಲ್ಲೂಕಿನ ಮುನಿರಾಬಾದ್ ತುಂಗಭದ್ರ ಜಲಾಶಯದ ಕಾಡಾ ಕಚೇರಿಯಲ್ಲಿ ಸೋಮವಾರ ನೀರಾವರಿ ಸಲಹಾ ಸಮಿತಿ ಸಭೆ ಆರಂಭವಾಯಿತು.</p>.<p>ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಕಾಡಾ ಅಧ್ಯಕ್ಷ ಎಚ್.ಎಂ.ತಿಪ್ಪೇರುದ್ರಸ್ವಾಮಿ, ಕೊಪ್ಪಳ, ಬಳ್ಳಾರಿ, ಹೊಸಪೇಟೆ, ರಾಯಚೂರು ಜಿಲ್ಲೆಯ ಶಾಸಕರು, ಸಂಸದರು, ಸಮಿತಿ ಸದಸ್ಯರು ಮತ್ತು ಜಲಾಶಯದ ಅಧೀಕ್ಷಕ ಎಂಜಿನಿಯರ್ ರಾಠೋಡ ಸಭೆಗೆ ನೀರಿನ ಲಭ್ಯತೆ ಕುರಿತು ಮಾಹಿತಿ ನೀಡಿದರು.</p>.<p>ಜಲಾಶಯದ ವ್ಯಾಪ್ತಿಯಲ್ಲಿ ಬರುವ ಎಡ, ಬಲ, ವಿಜಯನಗರ, ರಾಯಸಂಗನಬಸವಣ್ಣ, ಕೆಳಮಟ್ಟದ, ಮೇಲ್ಮಟ್ಟದ ಕಾಲುವೆಗಳಿಗೆ ನೀರು ನಿಗದಿಪಡಿಸಿ ಹರಿಸುವ ಕುರಿತು ತೀರ್ಮಾನಿಸಲಾಗುತ್ತದೆ.</p>.<p>ಜಲಾಶಯದ ವ್ಯಾಪ್ತಿಯಲ್ಲಿರುವ ಬೃಹತ್ ಕಾರ್ಖಾನೆಗಳಿಗೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ನೀರು ನಿಗದಿ ಪಡಿಸಲಾಗುತ್ತದೆ.</p>.<p>ಜಲಾಶಯದಲ್ಲಿ ಸದ್ಯ 35 ಟಿಎಂಸಿ ನೀರು ಇದ್ದು, ಎಡ ಮತ್ತು ಬಲದಂಡೆಗೆ ಟಿಎಂಸಿ ಲೆಕ್ಕದಲ್ಲಿ, ಉಪ ಕಾಲುವೆಗಳಿಗೆ ಕ್ಯೂಸೆಕ್ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.</p>.<p>ಮುಂಗಾರು ಮೊದಲ ಬೆಳೆಗೆ ಯಾವುದೇ ನೀರಿನ ಯಾವುದೇ ಸಮಸ್ಯೆಯಾಗದಂತೆ ನೀರು ಬಿಡಲಾಗುವುದು ಎಂದು ಕಾಡಾ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.</p>.<p>ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅಂತಿಮವಾಗಿ ನೀರು ಬಿಡುವ ಪ್ರಮಾಣ ನಿಗದಿಪಡಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ: </strong>ತಾಲ್ಲೂಕಿನ ಮುನಿರಾಬಾದ್ ತುಂಗಭದ್ರ ಜಲಾಶಯದ ಕಾಡಾ ಕಚೇರಿಯಲ್ಲಿ ಸೋಮವಾರ ನೀರಾವರಿ ಸಲಹಾ ಸಮಿತಿ ಸಭೆ ಆರಂಭವಾಯಿತು.</p>.<p>ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಕಾಡಾ ಅಧ್ಯಕ್ಷ ಎಚ್.ಎಂ.ತಿಪ್ಪೇರುದ್ರಸ್ವಾಮಿ, ಕೊಪ್ಪಳ, ಬಳ್ಳಾರಿ, ಹೊಸಪೇಟೆ, ರಾಯಚೂರು ಜಿಲ್ಲೆಯ ಶಾಸಕರು, ಸಂಸದರು, ಸಮಿತಿ ಸದಸ್ಯರು ಮತ್ತು ಜಲಾಶಯದ ಅಧೀಕ್ಷಕ ಎಂಜಿನಿಯರ್ ರಾಠೋಡ ಸಭೆಗೆ ನೀರಿನ ಲಭ್ಯತೆ ಕುರಿತು ಮಾಹಿತಿ ನೀಡಿದರು.</p>.<p>ಜಲಾಶಯದ ವ್ಯಾಪ್ತಿಯಲ್ಲಿ ಬರುವ ಎಡ, ಬಲ, ವಿಜಯನಗರ, ರಾಯಸಂಗನಬಸವಣ್ಣ, ಕೆಳಮಟ್ಟದ, ಮೇಲ್ಮಟ್ಟದ ಕಾಲುವೆಗಳಿಗೆ ನೀರು ನಿಗದಿಪಡಿಸಿ ಹರಿಸುವ ಕುರಿತು ತೀರ್ಮಾನಿಸಲಾಗುತ್ತದೆ.</p>.<p>ಜಲಾಶಯದ ವ್ಯಾಪ್ತಿಯಲ್ಲಿರುವ ಬೃಹತ್ ಕಾರ್ಖಾನೆಗಳಿಗೆ ಮತ್ತು ಕುಡಿಯುವ ನೀರಿನ ಉದ್ದೇಶಕ್ಕೆ ನೀರು ನಿಗದಿ ಪಡಿಸಲಾಗುತ್ತದೆ.</p>.<p>ಜಲಾಶಯದಲ್ಲಿ ಸದ್ಯ 35 ಟಿಎಂಸಿ ನೀರು ಇದ್ದು, ಎಡ ಮತ್ತು ಬಲದಂಡೆಗೆ ಟಿಎಂಸಿ ಲೆಕ್ಕದಲ್ಲಿ, ಉಪ ಕಾಲುವೆಗಳಿಗೆ ಕ್ಯೂಸೆಕ್ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.</p>.<p>ಮುಂಗಾರು ಮೊದಲ ಬೆಳೆಗೆ ಯಾವುದೇ ನೀರಿನ ಯಾವುದೇ ಸಮಸ್ಯೆಯಾಗದಂತೆ ನೀರು ಬಿಡಲಾಗುವುದು ಎಂದು ಕಾಡಾ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ.</p>.<p>ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದು, ಅಂತಿಮವಾಗಿ ನೀರು ಬಿಡುವ ಪ್ರಮಾಣ ನಿಗದಿಪಡಿಸಲಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>