<p><strong>ಕೊಪ್ಪಳ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಪಕ್ಷ ನಿರ್ಧರಿಸಿದರೆ ಕಡ್ಡಾಯವಾಗಿ ಶಾಸಕರ ಅಭಿಪ್ರಾಯ ಕೇಳಬೇಕು, ಅವರಿಗೆ ಪರ್ಯಾಯವಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕು’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.</p>.<p>ತಾಲ್ಲೂಕಿನ ಕೋಳೂರು–ಕಾಟ್ರಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಸಿ.ಎಂ. ಆಗಬಾರದು ಎಂದು ನಾನು ಹೇಳಿಲ್ಲ, ಸಿಎಂ ಆಗುತ್ತೇನೆ ಎಂದು ಶಿವಕುಮಾರ್ ಎಲ್ಲಿಯಾದರೂ ಹೇಳಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ನಾನು ಯಾರ ಬೆಂಬಲಿಗನೂ ಅಲ್ಲ. ಕಾಂಗ್ರೆಸ್ ಪಕ್ಷದ ಬೆಂಬಲಿಗ. ಸಿದ್ದರಾಮಯ್ಯನವರ ಆಡಳಿತ ವೈಖರಿ ಚೆನ್ನಾಗಿದ್ದು, ಅವರ ಬಗ್ಗೆ ಪ್ರೀತಿಯಿದೆ. ಆದ್ದರಿಂದ ಅವರ ಪರವಾಗಿ ಮಾತನಾಡುತ್ತೇನೆ’ ಎಂದು ಪ್ರತಿಕ್ರಿಯಿಸಿದರು. </p>.<p>ನೀವು ಸಚಿವ ಸ್ಥಾನದ ಆಕಾಂಕ್ಷಿಯೇ ಎನ್ನುವ ಪ್ರಶ್ನೆಗೆ, ‘ಈ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ಆದರೆ ಸಚಿವ ಸ್ಥಾನ ನೀಡುವಂತೆ ಖರ್ಗೆ ಅವರ ಬಳಿ ಕೇಳಿಲ್ಲ ಎಂದು ತಿಳಿಸಿದರು. </p>.<p>ಮಗು ಅಳದಿದ್ದರೆ ತಾಯಿಯೇ ಹಾಲು ಕೊಡುವುದಿಲ್ಲ; ಇನ್ನು ಸಚಿವ ಸ್ಥಾನವನ್ನು ಖರ್ಗೆ ಅವರ ಬಳಿ ಕೇಳದಿದ್ದರೂ ಹೇಗೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ‘ನಿಜವಾದ ತಾಯಿ ಖಂಡಿತವಾಗಿಯೂ ಹಾಲು ಕೊಡುತ್ತಾಳೆ’ ಎಂದು ಮಾರ್ಮಿಕವಾಗಿ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆಗೆ ಪಕ್ಷ ನಿರ್ಧರಿಸಿದರೆ ಕಡ್ಡಾಯವಾಗಿ ಶಾಸಕರ ಅಭಿಪ್ರಾಯ ಕೇಳಬೇಕು, ಅವರಿಗೆ ಪರ್ಯಾಯವಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕು’ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರೂ ಆದ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಹೇಳಿದರು.</p>.<p>ತಾಲ್ಲೂಕಿನ ಕೋಳೂರು–ಕಾಟ್ರಳ್ಳಿಯಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಡಿ.ಕೆ.ಶಿವಕುಮಾರ್ ಸಿ.ಎಂ. ಆಗಬಾರದು ಎಂದು ನಾನು ಹೇಳಿಲ್ಲ, ಸಿಎಂ ಆಗುತ್ತೇನೆ ಎಂದು ಶಿವಕುಮಾರ್ ಎಲ್ಲಿಯಾದರೂ ಹೇಳಿದ್ದಾರೆಯೇ’ ಎಂದು ಪ್ರಶ್ನಿಸಿದರು.</p>.<p>‘ನಾನು ಯಾರ ಬೆಂಬಲಿಗನೂ ಅಲ್ಲ. ಕಾಂಗ್ರೆಸ್ ಪಕ್ಷದ ಬೆಂಬಲಿಗ. ಸಿದ್ದರಾಮಯ್ಯನವರ ಆಡಳಿತ ವೈಖರಿ ಚೆನ್ನಾಗಿದ್ದು, ಅವರ ಬಗ್ಗೆ ಪ್ರೀತಿಯಿದೆ. ಆದ್ದರಿಂದ ಅವರ ಪರವಾಗಿ ಮಾತನಾಡುತ್ತೇನೆ’ ಎಂದು ಪ್ರತಿಕ್ರಿಯಿಸಿದರು. </p>.<p>ನೀವು ಸಚಿವ ಸ್ಥಾನದ ಆಕಾಂಕ್ಷಿಯೇ ಎನ್ನುವ ಪ್ರಶ್ನೆಗೆ, ‘ಈ ಬಗ್ಗೆ ಪಕ್ಷ ತೀರ್ಮಾನಿಸುತ್ತದೆ. ಆದರೆ ಸಚಿವ ಸ್ಥಾನ ನೀಡುವಂತೆ ಖರ್ಗೆ ಅವರ ಬಳಿ ಕೇಳಿಲ್ಲ ಎಂದು ತಿಳಿಸಿದರು. </p>.<p>ಮಗು ಅಳದಿದ್ದರೆ ತಾಯಿಯೇ ಹಾಲು ಕೊಡುವುದಿಲ್ಲ; ಇನ್ನು ಸಚಿವ ಸ್ಥಾನವನ್ನು ಖರ್ಗೆ ಅವರ ಬಳಿ ಕೇಳದಿದ್ದರೂ ಹೇಗೆ ಎನ್ನುವ ಮಾಧ್ಯಮದವರ ಪ್ರಶ್ನೆಗೆ ‘ನಿಜವಾದ ತಾಯಿ ಖಂಡಿತವಾಗಿಯೂ ಹಾಲು ಕೊಡುತ್ತಾಳೆ’ ಎಂದು ಮಾರ್ಮಿಕವಾಗಿ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>