<p>ಮುನಿರಾಬಾದ್: ನಮಗೆ ಕುಡಿಯಲು ನೀರು, ಉಸಿರಾಡಲು ಶುದ್ಧ ಗಾಳಿ ಬೇಕೆಂದರೆ ಇರುವ ಮರಗಳನ್ನು ಉಳಿಸಿಕೊಂಡು, ಇನ್ನೂ ಹೆಚ್ಚಿನ ಗಿಡಮರಗಳನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಿದೆ ಎಂದು ಇಂಡಿಯಾ ರಿಸರ್ವ್ ಬೆಟಾಲಿಯನ್ ಪ್ರಭಾರ ಕಮಾಂಡೆಂಟ್ ರಾಮಕೃಷ್ಣ ಮುದ್ದೇಪಾಲ್ ಅವರು ಹೇಳಿದರು.</p>.<p>ಇಲ್ಲಿನ ಇಂಡಿಯಾ ರಿಸರ್ವ್ ಬೆಟಾಲಿಯನ್ ಮತ್ತು ರಾಜ್ಯ ಮೀಸಲು ಪೊಲೀಸ್ ತರಬೇತಿ ಶಾಲೆಯ ಸಹಯೋಗದಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಾತಾವರಣವನ್ನು ಕಲುಷಿತಗೊಳಿಸದೇ, ಪರಿಸರದ ಘಟಕಗಳಾದ ನೀರು, ಮಣ್ಣು, ಗಾಳಿ, ನದಿ, ಬೆಟ್ಟ ಮತ್ತು ಗುಡ್ಡಗಳನ್ನು ಉಳಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಈ ದಿನಾಚರಣೆಯನ್ನು ವಿಶ್ವದ 143 ದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಉಪ ಕಮಾಂಡೆಂಟ್ ಜೆ.ರೂಪೇಶ್ ಮಾತನಾಡಿ, ಪರಿಸರ ಅಸಮತೋಲನ ಕಾರಣ ಈ ವರ್ಷ ನಾವು ಅತಿಯಾದ ಉಷ್ಣಾಂಶವನ್ನು ಅನುಭವಿಸಿದ್ದಲ್ಲದೆ ಸಾವು ನೋವುಗಳು ಕೂಡ ಸಂಭವಿಸಿದೆ. ಪರಿಸರ ಉಳಿಸಲು ಅರಣ್ಯ ನಾಶ ತಡೆಯಬೇಕು, ಗಿಡಮರ ಬೆಳೆಸಬೇಕು, ನೀರು ಮತ್ತು ನೈಸರ್ಗಿಕ ಸಂಪನ್ಮೂಲಗಳ ಮಿತ ಬಳಕೆಯ ಜೊತೆಗೆ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದರು.</p>.<p>170 ಎಕರೆ ಪ್ರದೇಶದ ನಮ್ಮ ಘಟಕದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಗಿಡಮರಗಳನ್ನು ಬೆಳೆಸಲಾಗಿದ್ದು, ಸಣ್ಣಪುಟ್ಟ ಕಾಡು ಪ್ರಾಣಿಗಳು ಮತ್ತು ಹಕ್ಕಿಗಳಿಗೆ ಆಶ್ರಯ ಕಲ್ಪಿಸಿದಂತಾಗಿದೆ ಎಂದರು.</p>.<p>ಅಧಿಕಾರಿಗಳಾದ ರಾಧಾಕೃಷ್ಣ ಅರಾವತ್, ಮಂಜಪ್ಪ ಕೋಟಿಹಾಳ, ಶರಣು ತೋಟದ, ಸಂಜಯ್ ಪವಾರ್, ಪ್ರಕಾಶ್, ಅರುಣ್ ಕುಮಾರ, ಆನಂದ ಸೇರಿದಂತೆ ಎರಡೂ ಘಟಕಗಳ ಅಧಿಕಾರಿ ಸಿಬ್ಬಂದಿ ವರ್ಗ ಹಾಜರಿದ್ದರು. ಘಟಕದ ಖಾಲಿ ಜಾಗದಲ್ಲಿ ಸಸಿ ನೆಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುನಿರಾಬಾದ್: ನಮಗೆ ಕುಡಿಯಲು ನೀರು, ಉಸಿರಾಡಲು ಶುದ್ಧ ಗಾಳಿ ಬೇಕೆಂದರೆ ಇರುವ ಮರಗಳನ್ನು ಉಳಿಸಿಕೊಂಡು, ಇನ್ನೂ ಹೆಚ್ಚಿನ ಗಿಡಮರಗಳನ್ನು ಬೆಳೆಸುವುದು ಇಂದಿನ ತುರ್ತು ಅಗತ್ಯವಿದೆ ಎಂದು ಇಂಡಿಯಾ ರಿಸರ್ವ್ ಬೆಟಾಲಿಯನ್ ಪ್ರಭಾರ ಕಮಾಂಡೆಂಟ್ ರಾಮಕೃಷ್ಣ ಮುದ್ದೇಪಾಲ್ ಅವರು ಹೇಳಿದರು.</p>.<p>ಇಲ್ಲಿನ ಇಂಡಿಯಾ ರಿಸರ್ವ್ ಬೆಟಾಲಿಯನ್ ಮತ್ತು ರಾಜ್ಯ ಮೀಸಲು ಪೊಲೀಸ್ ತರಬೇತಿ ಶಾಲೆಯ ಸಹಯೋಗದಲ್ಲಿ ಬುಧವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವಾತಾವರಣವನ್ನು ಕಲುಷಿತಗೊಳಿಸದೇ, ಪರಿಸರದ ಘಟಕಗಳಾದ ನೀರು, ಮಣ್ಣು, ಗಾಳಿ, ನದಿ, ಬೆಟ್ಟ ಮತ್ತು ಗುಡ್ಡಗಳನ್ನು ಉಳಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಲು ಈ ದಿನಾಚರಣೆಯನ್ನು ವಿಶ್ವದ 143 ದೇಶಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.</p>.<p>ಉಪ ಕಮಾಂಡೆಂಟ್ ಜೆ.ರೂಪೇಶ್ ಮಾತನಾಡಿ, ಪರಿಸರ ಅಸಮತೋಲನ ಕಾರಣ ಈ ವರ್ಷ ನಾವು ಅತಿಯಾದ ಉಷ್ಣಾಂಶವನ್ನು ಅನುಭವಿಸಿದ್ದಲ್ಲದೆ ಸಾವು ನೋವುಗಳು ಕೂಡ ಸಂಭವಿಸಿದೆ. ಪರಿಸರ ಉಳಿಸಲು ಅರಣ್ಯ ನಾಶ ತಡೆಯಬೇಕು, ಗಿಡಮರ ಬೆಳೆಸಬೇಕು, ನೀರು ಮತ್ತು ನೈಸರ್ಗಿಕ ಸಂಪನ್ಮೂಲಗಳ ಮಿತ ಬಳಕೆಯ ಜೊತೆಗೆ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಬೇಕು ಎಂದರು.</p>.<p>170 ಎಕರೆ ಪ್ರದೇಶದ ನಮ್ಮ ಘಟಕದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಗಿಡಮರಗಳನ್ನು ಬೆಳೆಸಲಾಗಿದ್ದು, ಸಣ್ಣಪುಟ್ಟ ಕಾಡು ಪ್ರಾಣಿಗಳು ಮತ್ತು ಹಕ್ಕಿಗಳಿಗೆ ಆಶ್ರಯ ಕಲ್ಪಿಸಿದಂತಾಗಿದೆ ಎಂದರು.</p>.<p>ಅಧಿಕಾರಿಗಳಾದ ರಾಧಾಕೃಷ್ಣ ಅರಾವತ್, ಮಂಜಪ್ಪ ಕೋಟಿಹಾಳ, ಶರಣು ತೋಟದ, ಸಂಜಯ್ ಪವಾರ್, ಪ್ರಕಾಶ್, ಅರುಣ್ ಕುಮಾರ, ಆನಂದ ಸೇರಿದಂತೆ ಎರಡೂ ಘಟಕಗಳ ಅಧಿಕಾರಿ ಸಿಬ್ಬಂದಿ ವರ್ಗ ಹಾಜರಿದ್ದರು. ಘಟಕದ ಖಾಲಿ ಜಾಗದಲ್ಲಿ ಸಸಿ ನೆಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>