ಮೋದಿಯವರು ನಗರಕ್ಕೆ ಆಗಮಿಸಿ ಬಹಿರಂಗ ಸಭೆಯನ್ನು ನಡೆಸುವ ಹಿನ್ನಲೆಯಲ್ಲಿ ಬೃಹತ್ ವೇದಿಕೆಯನ್ನು ಸಿದ್ಧ ಪಡಿಸಲಾಗುತ್ತಿದೆ. ಅದಕ್ಕೆ ಸೂಕ್ತ ಭದ್ರತೆ ನೀಡುವುದು ಪೊಲೀಸ್ ಇಲಾಖೆ ಕರ್ತವ್ಯ. ಸೂಕ್ತ ತಯಾರಿಯನ್ನು ಮಾಡಿಕೊಳ್ಳಲಾಗುತ್ತಿದೆ. ಅಲ್ಲದೆ ಕಾರ್ಯಕ್ರಮಕ್ಕೆ ರಾಯಚೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ನಾನಾ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದೆ. ಅವರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪಾರ್ಕಿಂಗ್ ಹಾಗೂ ಸಂಚಾರಕ್ಕೆ ಸ್ಥಳಗಳನ್ನು ವಿಭಾಗಿಸಲಾಗುತ್ತಿದೆ ಎಂದರು.