<p><strong>ಕೊಪ್ಪಳ:</strong> ‘ಜಿಲ್ಲೆಯಲ್ಲಿ ಏ.23 ರಿಂದ ಜೂ.3 ರವರೆಗೆ ₹1,40,86,197 ಮೌಲ್ಯದ ವಿವಿಧ ಮಾದರಿಯ ಅಬಕಾರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಬಕಾರಿ ಉಪ ಆಯುಕ್ತೆ ಸಿ.ಸೇಲಿನಾ ತಿಳಿಸಿದ್ದಾರೆ.</p>.<p>ಅಬಕಾರಿ ಇಲಾಖೆಯಿಂದ ಜಿಲ್ಲೆಯಾದ್ಯಂತ 45 ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಅವುಗಳಲ್ಲಿ 16 ಘೋರ, 7 ಬಿಎಲ್ಸಿ ಹಾಗೂ 15(ಎ) ಅಡಿ 24 ಸೇರಿದಂತೆ ಒಟ್ಟು 47 ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನುಬಂಧಿಸಲಾಗಿದೆ. ದಾಳಿ ಸಂದರ್ಭ 8 ವಾಹನ, 15,069.390 ಲೀಟರ್ ಮದ್ಯ, 44.340 ಲೀಟರ್ ಬಿಯರ್, 5 ಲೀಟರ್ ಐಡಿ ಮತ್ತು 40,000 ಲೀಟರ್ ಮದ್ಯಸಾರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹1,40,86,197 ಆಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಕಾರಣ ಮೇ 17 ರಿಂದ ಜೂ 7 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳು ಮದ್ಯ ಮಾರಾಟ ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ.</p>.<p>ಲಾಕ್ಡೌನ್ ಅವಧಿಯಲ್ಲಿ ದೃಶ್ಯ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿ ಅನುಸಾರ ಗಂಗಾವತಿ ವಲಯದ 2 ಸಿಎಲ್-7 ಸನ್ನದುಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಮೇ 24 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ.</p>.<p>ಇಂಥ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಉಪ ಆಯುಕ್ತರಾದ ಸಿ.ಸೇಲಿನಾ ಮೊ-9449597170, ಕೊಪ್ಪಳ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ (ಪ್ರಭಾರ) ಯಮನೂರಸಾಬ್ ಹೊಸಮನಿ ಮೊ- 9449597175, ಅಬಕಾರಿ ನಿರೀಕ್ಷಕರು ವಿಚಕ್ಷಣ ದಳದ ಸ್ವತಂತ್ರಕುಮಾರ ಮೊ- 9591795689, ಕೊಪ್ಪಳ ವಲಯದ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮೊ- 7675114929, ಗಂಗಾವತಿ ವಲಯದ ಅಬಕಾರಿ ನಿರೀಕ್ಷಕ ಅಜಯ್ ಉಮದಿ ಮೊ- 9740394078, ಕುಷ್ಟಗಿ ವಲಯದ ಅಬಕಾರಿ ನಿರೀಕ್ಷಕ ಚಾಂದಪಾಷಾ ಮೊ- 9845947828 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ‘ಜಿಲ್ಲೆಯಲ್ಲಿ ಏ.23 ರಿಂದ ಜೂ.3 ರವರೆಗೆ ₹1,40,86,197 ಮೌಲ್ಯದ ವಿವಿಧ ಮಾದರಿಯ ಅಬಕಾರಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಬಕಾರಿ ಉಪ ಆಯುಕ್ತೆ ಸಿ.ಸೇಲಿನಾ ತಿಳಿಸಿದ್ದಾರೆ.</p>.<p>ಅಬಕಾರಿ ಇಲಾಖೆಯಿಂದ ಜಿಲ್ಲೆಯಾದ್ಯಂತ 45 ಕಡೆಗಳಲ್ಲಿ ದಾಳಿ ಮಾಡಲಾಗಿದೆ. ಅವುಗಳಲ್ಲಿ 16 ಘೋರ, 7 ಬಿಎಲ್ಸಿ ಹಾಗೂ 15(ಎ) ಅಡಿ 24 ಸೇರಿದಂತೆ ಒಟ್ಟು 47 ಪ್ರಕರಣ ದಾಖಲಿಸಲಾಗಿದ್ದು, ಮೂವರನ್ನುಬಂಧಿಸಲಾಗಿದೆ. ದಾಳಿ ಸಂದರ್ಭ 8 ವಾಹನ, 15,069.390 ಲೀಟರ್ ಮದ್ಯ, 44.340 ಲೀಟರ್ ಬಿಯರ್, 5 ಲೀಟರ್ ಐಡಿ ಮತ್ತು 40,000 ಲೀಟರ್ ಮದ್ಯಸಾರ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹1,40,86,197 ಆಗಿದೆ ಎಂದು ಅವರು ತಿಳಿಸಿದ್ದಾರೆ.</p>.<p>ಕೋವಿಡ್ ಕಾರಣ ಮೇ 17 ರಿಂದ ಜೂ 7 ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಜಿಲ್ಲಾಧಿಕಾರಿಗಳು ಮದ್ಯ ಮಾರಾಟ ಸೇರಿದಂತೆ ಎಲ್ಲ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಿದ್ದಾರೆ.</p>.<p>ಲಾಕ್ಡೌನ್ ಅವಧಿಯಲ್ಲಿ ದೃಶ್ಯ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ಬಂದ ವರದಿ ಅನುಸಾರ ಗಂಗಾವತಿ ವಲಯದ 2 ಸಿಎಲ್-7 ಸನ್ನದುಗಳನ್ನು ಜಿಲ್ಲಾಧಿಕಾರಿಗಳ ಆದೇಶದನ್ವಯ ಮೇ 24 ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಮಾನತುಗೊಳಿಸಲಾಗಿದೆ.</p>.<p>ಇಂಥ ಪ್ರಕರಣಗಳು ಕಂಡುಬಂದಲ್ಲಿ ಅಬಕಾರಿ ಉಪ ಆಯುಕ್ತರಾದ ಸಿ.ಸೇಲಿನಾ ಮೊ-9449597170, ಕೊಪ್ಪಳ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ (ಪ್ರಭಾರ) ಯಮನೂರಸಾಬ್ ಹೊಸಮನಿ ಮೊ- 9449597175, ಅಬಕಾರಿ ನಿರೀಕ್ಷಕರು ವಿಚಕ್ಷಣ ದಳದ ಸ್ವತಂತ್ರಕುಮಾರ ಮೊ- 9591795689, ಕೊಪ್ಪಳ ವಲಯದ ಅಬಕಾರಿ ನಿರೀಕ್ಷಕ ರಮೇಶ ಅಗಡಿ ಮೊ- 7675114929, ಗಂಗಾವತಿ ವಲಯದ ಅಬಕಾರಿ ನಿರೀಕ್ಷಕ ಅಜಯ್ ಉಮದಿ ಮೊ- 9740394078, ಕುಷ್ಟಗಿ ವಲಯದ ಅಬಕಾರಿ ನಿರೀಕ್ಷಕ ಚಾಂದಪಾಷಾ ಮೊ- 9845947828 ಅವರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>