ತಾಲ್ಲೂಕಿನ ರಾಂಪೂರ, ಸಂಗಾಪೂರ, ಗೂಗಿಬಂಡಿ ಕ್ಯಾಂಪ್, ಮಲ್ಲಾಪೂರ, ಬಸವನದುರ್ಗಾ ಗ್ರಾಮಗಳಲ್ಲಿ ಇರುವ ಸರ್ಕಾರಿ ಭೂಮಿಯಲ್ಲಿನ ಬೆಟ್ಟಗುಡ್ಡಗಳಲ್ಲಿ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸಿ, ಕಲ್ಲುಗಳು ಬೇರೆ ರಾಜ್ಯಗಳಿಗೆ ಸಾಗಣೆ ಮಾಡುತ್ತಿದ್ದರು. ಇದರಿಂದ ಸ್ಥಳೀಯರಿಗೆ ತೊಂದರೆಯಾಗಿದೆ ಎಂದು
ದೂರು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಲಾರಿಗಳನ್ನು ವಶಪಡಿಸಿಕೊಂಡರು.