<p><strong>ಗಂಗಾವತಿ:</strong> ತಾಲ್ಲೂಕಿನ ಮಲ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಅಕ್ರಮವಾಗಿ ಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಗಳನ್ನು ಶುಕ್ರವಾರ ಕಂದಾಯ, ಹಂಪಿ ಪ್ರಾಧಿಕಾರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶ ಪಡಿಸಿಕೊಂಡರು.</p>.<p>ತಾಲ್ಲೂಕಿನ ರಾಂಪೂರ, ಸಂಗಾಪೂರ, ಗೂಗಿಬಂಡಿ ಕ್ಯಾಂಪ್, ಮಲ್ಲಾಪೂರ, ಬಸವನದುರ್ಗಾ ಗ್ರಾಮಗಳಲ್ಲಿ ಇರುವ ಸರ್ಕಾರಿ ಭೂಮಿಯಲ್ಲಿನ ಬೆಟ್ಟಗುಡ್ಡಗಳಲ್ಲಿ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸಿ, ಕಲ್ಲುಗಳು ಬೇರೆ ರಾಜ್ಯಗಳಿಗೆ ಸಾಗಣೆ ಮಾಡುತ್ತಿದ್ದರು. ಇದರಿಂದ ಸ್ಥಳೀಯರಿಗೆ ತೊಂದರೆಯಾಗಿದೆ ಎಂದು<br />ದೂರು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಲಾರಿಗಳನ್ನು ವಶಪಡಿಸಿಕೊಂಡರು.</p>.<p>ಕಲ್ಲುಗಳನ್ನು ತುಂಬಿದ್ದ ಮೂರು ಲಾರಿಗಳನ್ನು ವಶಪಡಿಸಿಕೊಂಡಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್, ಹಂಪಿ ಪ್ರಾಧಿಕಾರ ಇಲಾಖೆಯ ಅಧಿಕಾರಿಗಳಾದ ಧನಂಜಯ್, ನರೇಂದ್ರ, ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಗ್ರಾಮೀಣಾ ಠಾಣಾ ಪಿಎಸ್ಐ ದೊಡ್ಡಪ್ಪ ಜೆ, ಗ್ರಾಮ ಲೆಕ್ಕಾಧಿಕಾರಿ ಮಹಾಲಕ್ಷ್ಮೀ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಮಲ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾನಾ ಗ್ರಾಮಗಳಲ್ಲಿ ಅಕ್ರಮವಾಗಿ ಕಲ್ಲು ಸಾಗಣೆ ಮಾಡುತ್ತಿದ್ದ ಲಾರಿಗಳನ್ನು ಶುಕ್ರವಾರ ಕಂದಾಯ, ಹಂಪಿ ಪ್ರಾಧಿಕಾರ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶ ಪಡಿಸಿಕೊಂಡರು.</p>.<p>ತಾಲ್ಲೂಕಿನ ರಾಂಪೂರ, ಸಂಗಾಪೂರ, ಗೂಗಿಬಂಡಿ ಕ್ಯಾಂಪ್, ಮಲ್ಲಾಪೂರ, ಬಸವನದುರ್ಗಾ ಗ್ರಾಮಗಳಲ್ಲಿ ಇರುವ ಸರ್ಕಾರಿ ಭೂಮಿಯಲ್ಲಿನ ಬೆಟ್ಟಗುಡ್ಡಗಳಲ್ಲಿ ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸಿ, ಕಲ್ಲುಗಳು ಬೇರೆ ರಾಜ್ಯಗಳಿಗೆ ಸಾಗಣೆ ಮಾಡುತ್ತಿದ್ದರು. ಇದರಿಂದ ಸ್ಥಳೀಯರಿಗೆ ತೊಂದರೆಯಾಗಿದೆ ಎಂದು<br />ದೂರು ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಲಾರಿಗಳನ್ನು ವಶಪಡಿಸಿಕೊಂಡರು.</p>.<p>ಕಲ್ಲುಗಳನ್ನು ತುಂಬಿದ್ದ ಮೂರು ಲಾರಿಗಳನ್ನು ವಶಪಡಿಸಿಕೊಂಡಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಫಯಾಜ್, ಹಂಪಿ ಪ್ರಾಧಿಕಾರ ಇಲಾಖೆಯ ಅಧಿಕಾರಿಗಳಾದ ಧನಂಜಯ್, ನರೇಂದ್ರ, ಕಂದಾಯ ನಿರೀಕ್ಷಕ ಮಂಜುನಾಥ ಹಿರೇಮಠ, ಗ್ರಾಮೀಣಾ ಠಾಣಾ ಪಿಎಸ್ಐ ದೊಡ್ಡಪ್ಪ ಜೆ, ಗ್ರಾಮ ಲೆಕ್ಕಾಧಿಕಾರಿ ಮಹಾಲಕ್ಷ್ಮೀ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>