<p>ಗಂಗಾವತಿ: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅಕ್ರಮಕಲ್ಲು ಸಾಗಾಟ ಮಾಡುತ್ತಿರುವ ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ಸೋಮವಾರ ಬೆಳಿಗ್ಗೆ 2.30ಕ್ಕೆ ವಶಕ್ಕೆ ಪಡೆದಿದೆ.</p>.<p>ಮಲ್ಲಾಪುರ ಗ್ರಾಮದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುವ ಕುರಿತು ತಹಶೀಲ್ದಾರ್ ಯು.ನಾಗರಾಜ ಅವರ<br />ಗಮನಕ್ಕೆ ಬಂದಿತ್ತು. ಈ ಕುರಿತು ಹಲವು ಬಾರಿ ಟ್ರ್ಯಾಕ್ಟರ್ಗಳ ಮೇಲೆ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗಿತ್ತು.</p>.<p>ಈ ಭಾಗದಲ್ಲಿ ಕೆಲವರು ಕದ್ದು ಮುಚ್ಚಿ, ದ್ರಾಕ್ಷಿ ಬೆಳೆ ತೋಟಗಳ ಬಳಕೆ ಬೇಕಾಗುವ ಕಲ್ಲು ಕಂಬಗಳನ್ನು ಆಕ್ರಮವಾಗಿ ಸಾಗುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಏಕಾಏಕಿ ವಾಹನಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ವಾಹನಗಳ ಚಾಲಕರು ಪರಾರಿಯಾಗಿದ್ದು, ಒಂದು ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನಗರ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.</p>.<p>ತಹಶೀಲ್ದಾರ್ ಯು.ನಾಗರಾಜ, ಕಂದಾಯ ನೀರಿಕ್ಷಕ ಮಂಜುನಾಥ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿ ಅಕ್ರಮಕಲ್ಲು ಸಾಗಾಟ ಮಾಡುತ್ತಿರುವ ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ಸೋಮವಾರ ಬೆಳಿಗ್ಗೆ 2.30ಕ್ಕೆ ವಶಕ್ಕೆ ಪಡೆದಿದೆ.</p>.<p>ಮಲ್ಲಾಪುರ ಗ್ರಾಮದ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುವ ಕುರಿತು ತಹಶೀಲ್ದಾರ್ ಯು.ನಾಗರಾಜ ಅವರ<br />ಗಮನಕ್ಕೆ ಬಂದಿತ್ತು. ಈ ಕುರಿತು ಹಲವು ಬಾರಿ ಟ್ರ್ಯಾಕ್ಟರ್ಗಳ ಮೇಲೆ ದಾಳಿ ನಡೆಸಿ, ಪ್ರಕರಣಗಳನ್ನು ದಾಖಲಿಸಲಾಗಿತ್ತು.</p>.<p>ಈ ಭಾಗದಲ್ಲಿ ಕೆಲವರು ಕದ್ದು ಮುಚ್ಚಿ, ದ್ರಾಕ್ಷಿ ಬೆಳೆ ತೋಟಗಳ ಬಳಕೆ ಬೇಕಾಗುವ ಕಲ್ಲು ಕಂಬಗಳನ್ನು ಆಕ್ರಮವಾಗಿ ಸಾಗುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಏಕಾಏಕಿ ವಾಹನಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ವಾಹನಗಳ ಚಾಲಕರು ಪರಾರಿಯಾಗಿದ್ದು, ಒಂದು ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನಗರ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.</p>.<p>ತಹಶೀಲ್ದಾರ್ ಯು.ನಾಗರಾಜ, ಕಂದಾಯ ನೀರಿಕ್ಷಕ ಮಂಜುನಾಥ ಹಿರೇಮಠ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>