ಈ ಭಾಗದಲ್ಲಿ ಕೆಲವರು ಕದ್ದು ಮುಚ್ಚಿ, ದ್ರಾಕ್ಷಿ ಬೆಳೆ ತೋಟಗಳ ಬಳಕೆ ಬೇಕಾಗುವ ಕಲ್ಲು ಕಂಬಗಳನ್ನು ಆಕ್ರಮವಾಗಿ ಸಾಗುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಅಧಿಕಾರಿಗಳ ತಂಡ ಏಕಾಏಕಿ ವಾಹನಗಳ ಮೇಲೆ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ ವಾಹನಗಳ ಚಾಲಕರು ಪರಾರಿಯಾಗಿದ್ದು, ಒಂದು ಲಾರಿ ಮತ್ತು ಟ್ರ್ಯಾಕ್ಟರ್ ಅನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮಕ್ಕೆ ನಗರ ಪೋಲಿಸ್ ಠಾಣೆಗೆ ಒಪ್ಪಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ.