<p><strong>ಗಂಗಾವತಿ:</strong> ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ಗಳನ್ನು ತಹಶೀಲ್ದಾರ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.</p>.<p>ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಲ್ಲು ಮತ್ತು ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.</p>.<p>ಈಚೆಗೆ ಮರಳು ಉಸ್ತುವಾರಿ ಸಮಿತಿ ಸಭೆ ನಡೆಸಿ, ಮರಳುಕಾರ್ಯಪಡೆಗೆ ಅಕ್ರಮ ತಡೆಯುವಂತೆ ಸೂಚಿಸಲಾಗಿತ್ತು.</p>.<p>ತಹಶೀಲ್ದಾರ್ ಯು.ನಾಗರಾಜ ಮತ್ತು ಮಂಜುನಾಥ ಸೇರಿದಂತೆ ಸಿಬ್ಬಂದಿ ನಗರದ ವಿವಿಧೆಡೆ ಸಂಚರಿಸಿ ಅಕ್ರಮವಾಗಿ ಮರಳು ಮತ್ತು ಕಲ್ಲುಗಳನ್ನು ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬಸವನದುರ್ಗಾ ಗ್ರಾಮದಿಂದ ಗಂಗಾವತಿ ನಗರದ ಕಡೆ ಕಲ್ಲುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ತಡೆದು ನಿಲ್ಲಿಸಿ, ವಿಚಾರಿಸಿದಾಗ ಅಕ್ರಮವಾಗಿ ಕಲ್ಲು ಸಾಗಿಸುವ ವಿಷಯ ಬಯಲಿಗೆ ಬಂದಿದೆ. ಕೂಡಲೇ ವಿರುಪಾಪುರ ಲಲಿತ್ ಮಹಲ್ ಬಳಿ ವಾಹನ ವಶಪಡಿಸಿಕೊಳ್ಳಲಾಯಿತು.</p>.<p>‘ಜುಲೈ ನಗರದಲ್ಲಿ ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ ಟ್ರ್ಯಾಕ್ಟರ್ಗಳನ್ನು ವಶಪಡಿಸಿಕೊಂಡು ಗಂಗಾವತಿ ನಗರ ಠಾಣೆ ಸುಪರ್ದಿಗೆ ನೀಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ಅಕ್ರಮವಾಗಿ ಕಲ್ಲು ಮತ್ತು ಮರಳು ಸಾಗಿಸುತ್ತಿದ್ದ ಟ್ರಾಕ್ಟರ್ಗಳನ್ನು ತಹಶೀಲ್ದಾರ್ ನೇತೃತ್ವದ ತಂಡ ವಶಪಡಿಸಿಕೊಂಡಿದೆ.</p>.<p>ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಲ್ಲು ಮತ್ತು ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.</p>.<p>ಈಚೆಗೆ ಮರಳು ಉಸ್ತುವಾರಿ ಸಮಿತಿ ಸಭೆ ನಡೆಸಿ, ಮರಳುಕಾರ್ಯಪಡೆಗೆ ಅಕ್ರಮ ತಡೆಯುವಂತೆ ಸೂಚಿಸಲಾಗಿತ್ತು.</p>.<p>ತಹಶೀಲ್ದಾರ್ ಯು.ನಾಗರಾಜ ಮತ್ತು ಮಂಜುನಾಥ ಸೇರಿದಂತೆ ಸಿಬ್ಬಂದಿ ನಗರದ ವಿವಿಧೆಡೆ ಸಂಚರಿಸಿ ಅಕ್ರಮವಾಗಿ ಮರಳು ಮತ್ತು ಕಲ್ಲುಗಳನ್ನು ಸಾಗಿಸುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬಸವನದುರ್ಗಾ ಗ್ರಾಮದಿಂದ ಗಂಗಾವತಿ ನಗರದ ಕಡೆ ಕಲ್ಲುಗಳನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್ತಡೆದು ನಿಲ್ಲಿಸಿ, ವಿಚಾರಿಸಿದಾಗ ಅಕ್ರಮವಾಗಿ ಕಲ್ಲು ಸಾಗಿಸುವ ವಿಷಯ ಬಯಲಿಗೆ ಬಂದಿದೆ. ಕೂಡಲೇ ವಿರುಪಾಪುರ ಲಲಿತ್ ಮಹಲ್ ಬಳಿ ವಾಹನ ವಶಪಡಿಸಿಕೊಳ್ಳಲಾಯಿತು.</p>.<p>‘ಜುಲೈ ನಗರದಲ್ಲಿ ಆಕ್ರಮವಾಗಿ ಮರಳು ಸಾಗಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆಸಿ ಟ್ರ್ಯಾಕ್ಟರ್ಗಳನ್ನು ವಶಪಡಿಸಿಕೊಂಡು ಗಂಗಾವತಿ ನಗರ ಠಾಣೆ ಸುಪರ್ದಿಗೆ ನೀಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>