ಸ್ಥಳೀಯ ನಿವಾಸಿಗಳು ನೀಡಿದ ದೂರಿನನ್ವಯ ಆಹಾರ, ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಅಕ್ಕಿ ಸಂಗ್ರಹಿಸಿದ ಮನೆಗೆ ಭೇಟಿ ನೀಡಿದರು. ಮನೆಯ ಮಾಲೀಕರಿಗೆ ಫೋನ್ ಕರೆ ಮಾಡಿದರೂ ಕರೆ ಸ್ವೀಕರಿಸಲಿಲ್ಲ. ಆದ್ದರಿಂದ ಆಹಾರ ಇಲಾಖೆ ಅನುಮತಿಯಿಲ್ಲದೇ ಯಾರೂ ಮನೆಯ ಬಾಗಿಲು ತೆರೆಯುವಂತಿಲ್ಲ ಎಂದು ಮನೆಯ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.