<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ಸುಪ್ರೀಂಕೋರ್ಟ್ ಆದೇಶದ ಮೇರೆಗೆ ತಾಲ್ಲೂಕಿನ ಆನೆಗೊಂದಿ, ಹನುಮನಹಳ್ಳಿ, ರಂಗಾಪುರ ಹಾಗೂ ಸಾಣಾಪುರ ಗ್ರಾಮಗಳಲ್ಲಿ ಅನಧಿಕೃತ ರೆಸಾರ್ಟ್ಗಳನ್ನು ಮಂಗಳವಾರ ತೆರವುಗೊಳಿಸಲಾಯಿತು.</p>.<p>ಬೆಳಿಗ್ಗೆ ತಾಲ್ಲೂಕಾಡಳಿತ, ಕಂದಾಯ, ಪೊಲೀಸ್ ಇಲಾಖೆ, ಜೆಸ್ಕಾಂ, ಗ್ರಾ.ಪಂ ಸಿಬ್ಬಂದಿಯು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಆನೆಗೊಂದಿಯಿಂದ ರೆಸಾರ್ಟ್ ತೆರವು ಕಾರ್ಯಾಚರಣೆ ಆರಂಭಿಸಿದರು. ಮೊದಲಿಗೆ ಕಾರ್ಯಾಚರಣೆ ನಡೆಸಲು ಮುಂದಾದಾಗ ಮಾಲೀಕರು ಸ್ವಯಂ ತೆರವಿಗೆ ಅವಕಾಶ ನೀಡುವಂತೆ ಅಧಿಕಾರಿಗಳನ್ನು ಕೋರಿದರು.</p>.<p>ನ್ಯಾಯಾಲಯದ ಆದೇಶವಿರುವ ಕಾರಣ ತೆರವು ಮಾಡಲೇಬೇಕು ಎಂದು ಅಧಿಕಾರಿಗಳು ತಿಳಿಸಿದಾಗ ಮಾಲೀಕರು ಹಿಂದೆ ಸರಿದರು. ಜೆಸಿಬಿಗಳು ರೆಸಾರ್ಟ್ನ ಕಟ್ಟಡ ಮತ್ತು ಗುಡಿಸಲುಗಳನ್ನು ನೆಲಸಮ ಮಾಡಿದವು. ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ರೆಸಾರ್ಟ್ ಮಾಲೀಕರು ಕೆಲ ಅಗತ್ಯ ವಸ್ತುಗಳನ್ನು ಹೊರ ತೆಗೆದರು.</p>.<p>ಆನೆಗೊಂದಿ, ಹನುಮನಹಳ್ಳಿ, ರಂಗಾಪುರ ಹಾಗೂ ಸಾಣಾಪುರ ಗ್ರಾಮದಲ್ಲಿ 6 ಅನಧಿಕೃತ ರೆಸಾರ್ಟ್ನ ಗುಡಿಸಲು ಹಾಗೂ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಒಂದು ರೆಸಾರ್ಟ್ನ ವಿಷಯ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.</p>.<p>ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ರಮೇಶ ವಟ್ಗಲ್ ಮಾತನಾಡಿ, ‘ಆನೆಗೊಂದಿ ಭಾಗದ ಬಹುತೇಕ ಕಂದಾಯ ಜಮೀನುಗಳಲ್ಲಿ ಪ್ರಾಧಿಕಾರದ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಕಟ್ಟಡ, ರೆಸಾರ್ಟ್, ಗುಡಿಸಲು ನಿರ್ಮಿಸಲಾಗಿದೆ’ ಎಂದರು.</p>.<p>‘ಇಂಥ ಕಟ್ಟಡಗಳ ನಿರ್ಮಾಣದಿಂದ ವಿಜಯನಗರ ಕಾಲದ ಐತಿಹಾಸಿಕ ಸ್ಥಳಗಳಿಗೆ ಧಕ್ಕೆ ಉಂಟಾಗುತ್ತದೆ. ನಿಸರ್ಗ ಹಾಳಾಗಲಿದೆ. ಆದರೂ ಕೆಲವರು ಅನಧಿಕೃತವಾಗಿ ರೆಸಾರ್ಟ್ ನಿರ್ಮಿಸಿಕೊಂಡು ನಡೆಸುತ್ತಿದ್ದಾರೆ. ವಿದ್ಯುತ್ ಸಂಪರ್ಕಕ್ಕೆ ಅವಕಾಶ ಇಲ್ಲದಿದ್ದರೂ ರೆಸಾರ್ಟ್ ಮಾಲೀಕರು ಕೋರ್ಟ್ ಮೊರೆ ಹೋಗಿದ್ದಾರೆ’ ಎಂದು ಹೇಳಿದರು.</p>.<p>‘ಕೋರ್ಟ್ನ ಆದೇಶದನ್ವಯ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ 16 ಅನಧಿಕೃತ ರೆಸಾರ್ಟ್ಗಳ ವಿಷಯ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದೇಶ ಬಂದರೆ ಅವುಗಳನ್ನೂ ತೆರವು ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಯು.ನಾಗರಾಜ, ಗ್ರಾಮೀಣ ಠಾಣೆ ಪಿಐ ರಂಗಪ್ಪ ದೊಡ್ಡಮನಿ ಸೇರಿದಂತೆ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ, ತಾಲ್ಲೂಕಾಡಳಿತ, ಕಂದಾಯ, ಜೆಸ್ಕಾಂ, ಆನೆಗೊಂದಿ, ಸಾಣಾಪುರ ಗ್ರಾ.ಪಂ ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ಸುಪ್ರೀಂಕೋರ್ಟ್ ಆದೇಶದ ಮೇರೆಗೆ ತಾಲ್ಲೂಕಿನ ಆನೆಗೊಂದಿ, ಹನುಮನಹಳ್ಳಿ, ರಂಗಾಪುರ ಹಾಗೂ ಸಾಣಾಪುರ ಗ್ರಾಮಗಳಲ್ಲಿ ಅನಧಿಕೃತ ರೆಸಾರ್ಟ್ಗಳನ್ನು ಮಂಗಳವಾರ ತೆರವುಗೊಳಿಸಲಾಯಿತು.</p>.<p>ಬೆಳಿಗ್ಗೆ ತಾಲ್ಲೂಕಾಡಳಿತ, ಕಂದಾಯ, ಪೊಲೀಸ್ ಇಲಾಖೆ, ಜೆಸ್ಕಾಂ, ಗ್ರಾ.ಪಂ ಸಿಬ್ಬಂದಿಯು ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಆನೆಗೊಂದಿಯಿಂದ ರೆಸಾರ್ಟ್ ತೆರವು ಕಾರ್ಯಾಚರಣೆ ಆರಂಭಿಸಿದರು. ಮೊದಲಿಗೆ ಕಾರ್ಯಾಚರಣೆ ನಡೆಸಲು ಮುಂದಾದಾಗ ಮಾಲೀಕರು ಸ್ವಯಂ ತೆರವಿಗೆ ಅವಕಾಶ ನೀಡುವಂತೆ ಅಧಿಕಾರಿಗಳನ್ನು ಕೋರಿದರು.</p>.<p>ನ್ಯಾಯಾಲಯದ ಆದೇಶವಿರುವ ಕಾರಣ ತೆರವು ಮಾಡಲೇಬೇಕು ಎಂದು ಅಧಿಕಾರಿಗಳು ತಿಳಿಸಿದಾಗ ಮಾಲೀಕರು ಹಿಂದೆ ಸರಿದರು. ಜೆಸಿಬಿಗಳು ರೆಸಾರ್ಟ್ನ ಕಟ್ಟಡ ಮತ್ತು ಗುಡಿಸಲುಗಳನ್ನು ನೆಲಸಮ ಮಾಡಿದವು. ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು. ರೆಸಾರ್ಟ್ ಮಾಲೀಕರು ಕೆಲ ಅಗತ್ಯ ವಸ್ತುಗಳನ್ನು ಹೊರ ತೆಗೆದರು.</p>.<p>ಆನೆಗೊಂದಿ, ಹನುಮನಹಳ್ಳಿ, ರಂಗಾಪುರ ಹಾಗೂ ಸಾಣಾಪುರ ಗ್ರಾಮದಲ್ಲಿ 6 ಅನಧಿಕೃತ ರೆಸಾರ್ಟ್ನ ಗುಡಿಸಲು ಹಾಗೂ ಕಟ್ಟಡಗಳನ್ನು ತೆರವುಗೊಳಿಸಲಾಯಿತು. ಒಂದು ರೆಸಾರ್ಟ್ನ ವಿಷಯ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.</p>.<p>ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ರಮೇಶ ವಟ್ಗಲ್ ಮಾತನಾಡಿ, ‘ಆನೆಗೊಂದಿ ಭಾಗದ ಬಹುತೇಕ ಕಂದಾಯ ಜಮೀನುಗಳಲ್ಲಿ ಪ್ರಾಧಿಕಾರದ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಕಟ್ಟಡ, ರೆಸಾರ್ಟ್, ಗುಡಿಸಲು ನಿರ್ಮಿಸಲಾಗಿದೆ’ ಎಂದರು.</p>.<p>‘ಇಂಥ ಕಟ್ಟಡಗಳ ನಿರ್ಮಾಣದಿಂದ ವಿಜಯನಗರ ಕಾಲದ ಐತಿಹಾಸಿಕ ಸ್ಥಳಗಳಿಗೆ ಧಕ್ಕೆ ಉಂಟಾಗುತ್ತದೆ. ನಿಸರ್ಗ ಹಾಳಾಗಲಿದೆ. ಆದರೂ ಕೆಲವರು ಅನಧಿಕೃತವಾಗಿ ರೆಸಾರ್ಟ್ ನಿರ್ಮಿಸಿಕೊಂಡು ನಡೆಸುತ್ತಿದ್ದಾರೆ. ವಿದ್ಯುತ್ ಸಂಪರ್ಕಕ್ಕೆ ಅವಕಾಶ ಇಲ್ಲದಿದ್ದರೂ ರೆಸಾರ್ಟ್ ಮಾಲೀಕರು ಕೋರ್ಟ್ ಮೊರೆ ಹೋಗಿದ್ದಾರೆ’ ಎಂದು ಹೇಳಿದರು.</p>.<p>‘ಕೋರ್ಟ್ನ ಆದೇಶದನ್ವಯ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ. ಇನ್ನೂ 16 ಅನಧಿಕೃತ ರೆಸಾರ್ಟ್ಗಳ ವಿಷಯ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆದೇಶ ಬಂದರೆ ಅವುಗಳನ್ನೂ ತೆರವು ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>ತಹಶೀಲ್ದಾರ್ ಯು.ನಾಗರಾಜ, ಗ್ರಾಮೀಣ ಠಾಣೆ ಪಿಐ ರಂಗಪ್ಪ ದೊಡ್ಡಮನಿ ಸೇರಿದಂತೆ ಹಂಪಿ ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ, ತಾಲ್ಲೂಕಾಡಳಿತ, ಕಂದಾಯ, ಜೆಸ್ಕಾಂ, ಆನೆಗೊಂದಿ, ಸಾಣಾಪುರ ಗ್ರಾ.ಪಂ ಪಿಡಿಒ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>