<p>ಗಂಗಾವತಿ: ದ್ರಾಕ್ಷಿ ತೋಟಕ್ಕೆ ಬಳಸುವ ಕಲ್ಲಿನ ಕಂಬಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಲಾರಿಯನ್ನು ತಹಶೀಲ್ದಾರ ಯು.ನಾಗರಾಜ ನೇತೃತ್ವದಲ್ಲಿನ ತಂಡ ಜುಲೈನಗರದ ರಿಲಾಯನ್ಸ್ ಪೆಟ್ರೋಲ್ ಬಂಕ್ ಬಳಿ ವಶಕ್ಕೆ ಪಡೆದಿದೆ.</p>.<p>ಮಲ್ಲಾಪುರ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ದ್ರಾಕ್ಷಿ ತೋಟಕ್ಕೆ ಬಳಸುವ ಕಲ್ಲಿನ ಕಂಬಗಳನ್ನು ಲಾರಿ ಮೂಲಕ ಸಾಗಿಸಲಾಗುತ್ತಿದೆ ಎಂದು ಸಹಾಯ ಆಯುಕ್ತರಿಗೆ ಕರೆ ಬಂದಿತ್ತು.</p>.<p>ಕೂಡಲೇ ಗಂಗಾವತಿ ತಹಶೀಲ್ದಾರರಿಗೆ ಕರೆ ಮಾಡಿ, ಲಾರಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಿದ್ದರು. ಆದ್ದರಿಂದ ತಹಶೀಲ್ದಾರ ಕಲ್ಲು ಆಕ್ರಮವಾಗಿ ಸಾಗಿಸುತ್ತಿರುವ ಲಾರಿ ಮೇಲೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಅಲ್ಲಿ ಚಾಲಕ ಮತ್ತು ಕ್ಲೀನರ್ ಲಾರಿ ಬಿಟ್ಟು ಪರಾರಿಯಾಗಿದ್ದರು.</p>.<p>ಕೂಡಲೇ ಮೆಕಾನಿಕ್ ಒಬ್ಬರನ್ನು ಕರೆಯಿಸಿ ಅವರ ನೆರವಿನಿಂದ ಲಾರಿಯನ್ನು ಸ್ಥಳಿಯ ಠಾಣೆಗೆ ತಂದು ನಿಲ್ಲಿಸಲಾಯಿತು. ಈ ವೇಳೆಯಲ್ಲಿ ಸಂಚಾರಿ ಠಾಣೆಯ ಪಿಎಸ್ಐ ಪುಂಡಲಿಕ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ದ್ರಾಕ್ಷಿ ತೋಟಕ್ಕೆ ಬಳಸುವ ಕಲ್ಲಿನ ಕಂಬಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಲಾರಿಯನ್ನು ತಹಶೀಲ್ದಾರ ಯು.ನಾಗರಾಜ ನೇತೃತ್ವದಲ್ಲಿನ ತಂಡ ಜುಲೈನಗರದ ರಿಲಾಯನ್ಸ್ ಪೆಟ್ರೋಲ್ ಬಂಕ್ ಬಳಿ ವಶಕ್ಕೆ ಪಡೆದಿದೆ.</p>.<p>ಮಲ್ಲಾಪುರ ಗ್ರಾಮದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯಿಂದ ದ್ರಾಕ್ಷಿ ತೋಟಕ್ಕೆ ಬಳಸುವ ಕಲ್ಲಿನ ಕಂಬಗಳನ್ನು ಲಾರಿ ಮೂಲಕ ಸಾಗಿಸಲಾಗುತ್ತಿದೆ ಎಂದು ಸಹಾಯ ಆಯುಕ್ತರಿಗೆ ಕರೆ ಬಂದಿತ್ತು.</p>.<p>ಕೂಡಲೇ ಗಂಗಾವತಿ ತಹಶೀಲ್ದಾರರಿಗೆ ಕರೆ ಮಾಡಿ, ಲಾರಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಿದ್ದರು. ಆದ್ದರಿಂದ ತಹಶೀಲ್ದಾರ ಕಲ್ಲು ಆಕ್ರಮವಾಗಿ ಸಾಗಿಸುತ್ತಿರುವ ಲಾರಿ ಮೇಲೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಅಲ್ಲಿ ಚಾಲಕ ಮತ್ತು ಕ್ಲೀನರ್ ಲಾರಿ ಬಿಟ್ಟು ಪರಾರಿಯಾಗಿದ್ದರು.</p>.<p>ಕೂಡಲೇ ಮೆಕಾನಿಕ್ ಒಬ್ಬರನ್ನು ಕರೆಯಿಸಿ ಅವರ ನೆರವಿನಿಂದ ಲಾರಿಯನ್ನು ಸ್ಥಳಿಯ ಠಾಣೆಗೆ ತಂದು ನಿಲ್ಲಿಸಲಾಯಿತು. ಈ ವೇಳೆಯಲ್ಲಿ ಸಂಚಾರಿ ಠಾಣೆಯ ಪಿಎಸ್ಐ ಪುಂಡಲಿಕ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>