ಅಲ್ಲದೆ, ಹಿಂದೂ ಜಾಗರಣ ವೇದಿಕೆಯವರು ನಗರದಲ್ಲಿರುವ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು. ಪ್ರಾಣಿ ವಧೆ ಮಾಡುವವರನ್ನು ಬಂಧಿಸಬೇಕು. ಕಾನೂನು ಕ್ರಮ ಕೈಗೊಂಡು ಗೋಹತ್ಯೆ ತಡೆಯಬೇಕು ಎಂದು ಆಗ್ರಹಿಸಿ ನಗರಸಭೆಗೆ ಮುಂದೆ ಪ್ರತಿಭಟನೆ ನಡೆಸಿದ್ದರು. ತೆರವಿಗೆ ಕಾಲಾವಕಾಶ ನೀಡಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.