<p>ಗಂಗಾವತಿ: ಇಲ್ಲಿನ ಅಮರ ಭಗತ್ಸಿಂಗ್ ನಗರದ ಬೈಪಾಸ್ ರಸ್ತೆ ಮತ್ತು ಎಚ್.ಆರ್.ಸಿ ಕಾಲೊನಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಈಚೆಗೆ ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ನೇತೃತ್ವದ ತಂಡ ತೆರವು ಮಾಡಿತು.</p>.<p>ನಗರದ ಎಚ್.ಆರ್.ಎಸ್ ಕಾಲೊನಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಣ ವಧೆ ಹಾಗೂ ಕಸಾಯಿಖಾನೆ ಕುರಿತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ಅದರ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ, 20 ಕೋಣಗಳನ್ನು ರಕ್ಷಣೆ ಮಾಡಿ, ಇಬ್ಬರನ್ನು ಬಂಧಿಸಿದ್ದರು.</p>.<p>ಅಲ್ಲದೆ, ಹಿಂದೂ ಜಾಗರಣ ವೇದಿಕೆಯವರು ನಗರದಲ್ಲಿರುವ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು. ಪ್ರಾಣಿ ವಧೆ ಮಾಡುವವರನ್ನು ಬಂಧಿಸಬೇಕು. ಕಾನೂನು ಕ್ರಮ ಕೈಗೊಂಡು ಗೋಹತ್ಯೆ ತಡೆಯಬೇಕು ಎಂದು ಆಗ್ರಹಿಸಿ ನಗರಸಭೆಗೆ ಮುಂದೆ ಪ್ರತಿಭಟನೆ ನಡೆಸಿದ್ದರು. ತೆರವಿಗೆ ಕಾಲಾವಕಾಶ ನೀಡಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.</p>.<p>ಆದ್ದರಿಂದ ನಗರಸಭೆ ಪೌರಾಯುಕ್ತರ ನೇತೃತ್ವದ ತಂಡ ಜೆಸಿಬಿಗಳ ಮೂಲಕ ಅಕ್ರಮ ಕಸಾಯಿಖಾನೆಗಳನ್ನು ತೆರವು ಮಾಡಿತು.</p>.<p>ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ, ಆರೋಗ್ಯ ನಿರೀಕ್ಷಕ ನಾಗರಾಜ ಸೇರಿದಂತೆ ನಗರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ಇಲ್ಲಿನ ಅಮರ ಭಗತ್ಸಿಂಗ್ ನಗರದ ಬೈಪಾಸ್ ರಸ್ತೆ ಮತ್ತು ಎಚ್.ಆರ್.ಸಿ ಕಾಲೊನಿಯಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಈಚೆಗೆ ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ ನೇತೃತ್ವದ ತಂಡ ತೆರವು ಮಾಡಿತು.</p>.<p>ನಗರದ ಎಚ್.ಆರ್.ಎಸ್ ಕಾಲೊನಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಣ ವಧೆ ಹಾಗೂ ಕಸಾಯಿಖಾನೆ ಕುರಿತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು.</p>.<p>ಅದರ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ, 20 ಕೋಣಗಳನ್ನು ರಕ್ಷಣೆ ಮಾಡಿ, ಇಬ್ಬರನ್ನು ಬಂಧಿಸಿದ್ದರು.</p>.<p>ಅಲ್ಲದೆ, ಹಿಂದೂ ಜಾಗರಣ ವೇದಿಕೆಯವರು ನಗರದಲ್ಲಿರುವ ಕಸಾಯಿಖಾನೆಗಳನ್ನು ತೆರವುಗೊಳಿಸಬೇಕು. ಪ್ರಾಣಿ ವಧೆ ಮಾಡುವವರನ್ನು ಬಂಧಿಸಬೇಕು. ಕಾನೂನು ಕ್ರಮ ಕೈಗೊಂಡು ಗೋಹತ್ಯೆ ತಡೆಯಬೇಕು ಎಂದು ಆಗ್ರಹಿಸಿ ನಗರಸಭೆಗೆ ಮುಂದೆ ಪ್ರತಿಭಟನೆ ನಡೆಸಿದ್ದರು. ತೆರವಿಗೆ ಕಾಲಾವಕಾಶ ನೀಡಿ ಪೌರಾಯುಕ್ತರಿಗೆ ಮನವಿ ಸಲ್ಲಿಸಿದ್ದರು.</p>.<p>ಆದ್ದರಿಂದ ನಗರಸಭೆ ಪೌರಾಯುಕ್ತರ ನೇತೃತ್ವದ ತಂಡ ಜೆಸಿಬಿಗಳ ಮೂಲಕ ಅಕ್ರಮ ಕಸಾಯಿಖಾನೆಗಳನ್ನು ತೆರವು ಮಾಡಿತು.</p>.<p>ನಗರಸಭೆ ಪೌರಾಯುಕ್ತ ಅರವಿಂದ ಜಮಖಂಡಿ, ಆರೋಗ್ಯ ನಿರೀಕ್ಷಕ ನಾಗರಾಜ ಸೇರಿದಂತೆ ನಗರಸಭೆ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>