ಗಂಗಾವತಿ: ತಾಲ್ಲೂಕಿನ ಚಿಕ್ಕಬೆಣಕಲ್ ಗ್ರಾಮದಲ್ಲಿ ಅಕ್ರಮವಾಗಿ ಸಾಗಣೆ ಮಾಡಲು ಮುಂದಾಗಿದ್ದ ಅಕ್ರಮ ಪಡಿತರ ಅಕ್ಕಿಯನ್ನು ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡರು.
ಚಿಕ್ಕಬೆಣಕಲ್ ಗ್ರಾಮದ ಬೆಟ್ಟದ ಲಿಂಗೇಶ್ವರ ದೇವಸ್ಥಾನ ಪಕ್ಕದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ತುಂಬಿಕೊಂಡು ಸಾಗಿಸಲಾಗುತ್ತಿದೆ ಎಂಬ ದೂರಿನ ಮೇರೆಗೆ ಅಧಿಕಾರಿಗಳು ದಾಳಿಯನ್ನು ನಡೆಸಿದರು.
ಲಾರಿಯಲ್ಲಿದ್ದ ಲಕ್ಷಾಂತರ 82 ಕ್ವಿಂಟಲ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳಾದ ಗಂಗಾವತಿಯ ರಫೀಖಾನ್, ಮಹೆಬೂಬ್ ಪಾಷಾ ಮತ್ತು ವಿಶ್ವನಾಥ ಎಂಬುವವರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಹಶೀಲ್ದಾರ್ ಯು.ನಾಗರಾಜ, ಆಹಾರ ನೀರಿಕ್ಷಕರಾದ ಎಚ್.ಐ.ಬಗಲಿ, ಗ್ರಾಮೀಣ ಠಾಣಾ ಪಿಎಸ್ಐ ದೊಡ್ಡಪ್ಪ ಇದ್ದರು.