<p><strong>ಕೊಪ್ಪಳ:</strong> ’ರಾಜ್ಯ ಸರ್ಕಾರ ತರಾತುರಿಯಲ್ಲಿ ಮಾಡುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯಿಂದಾಗಿ ರಾಜಕೀಯದ ಮೇಲೆ ವ್ಯಾಪಕ ಪರಿಣಾಮ ಬೀರುತ್ತದೆ’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ ’ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಮೀಕ್ಷೆ ಮಾಡಿಸಲಾಗುತ್ತಿದೆ. ಯಾವ ಸಮುದಾಯದ ಜನ ಕಡಿಮೆ ಸಂಖ್ಯೆಯಲ್ಲಿ ಇರುತ್ತಾರೊ; ಆ ಸಮುದಾಯದ ನಾಯಕರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ’ ಎಂದರು. </p><p>‘ಆಯೋಗ ಈಗಾಗಲೇ ಸಾಕಷ್ಟು ಲೋಪಗಳನ್ನು ಮಾಡಿದ್ದು, ಇನ್ನಷ್ಟು ಸಮಯ ತೆಗೆದುಕೊಂಡು ಮಾಡಿದ್ದರೆ ವೈಜ್ಞಾನಿಕವಾಗಿ ವರದಿ ಬರುತ್ತಿತ್ತು. ಹಿಂದಿನ ವರದಿ ಅವೈಜ್ಞಾನಿಕವಾಗಿದೆ ಎನ್ನುವ ಕಾರಣಕ್ಕೆ ಅನುಷ್ಠಾನ ಮಾಡಿಲ್ಲ. ಈಗಿನ ವರದಿಯದ್ದೂ ಅದೇ ಪರಿಸ್ಥಿತಿಯಾಗುವ ಆತಂಕವಿದೆ. ದಸರಾ ಹಿಂದೂಗಳ ಹಬ್ಬವಾಗಿದ್ದು, ಹಬ್ಬದ ಸಮಯದಲ್ಲಿ ಈ ಸಮೀಕ್ಷೆಯ ಅಗತ್ಯವಾದರೂ ಏನಿತ್ತು’ ಎಂದು ಪ್ರಶ್ನಿಸಿದರು.</p><p>ಹುಬ್ಬಳ್ಳಿಯಲ್ಲಿ ನಡೆದ ಏಕತಾ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿ ’ಅಲ್ಲಿ ನಡೆದಿದ್ದು ಬೇಡಜಂಗಮ ಸಮಾವೇಶ. ಆ ಸಮಾವೇಶಕ್ಕೆ ಪಂಚಮಸಾಲಿ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಅವರು ನಮ್ಮ ಪೀಠಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಕಾರ್ಯಕ್ರಮ ಸಂಪೂರ್ಣ ವಿಫಲವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ’ರಾಜ್ಯ ಸರ್ಕಾರ ತರಾತುರಿಯಲ್ಲಿ ಮಾಡುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯಿಂದಾಗಿ ರಾಜಕೀಯದ ಮೇಲೆ ವ್ಯಾಪಕ ಪರಿಣಾಮ ಬೀರುತ್ತದೆ’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.</p><p>ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿ ’ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಸಮೀಕ್ಷೆ ಮಾಡಿಸಲಾಗುತ್ತಿದೆ. ಯಾವ ಸಮುದಾಯದ ಜನ ಕಡಿಮೆ ಸಂಖ್ಯೆಯಲ್ಲಿ ಇರುತ್ತಾರೊ; ಆ ಸಮುದಾಯದ ನಾಯಕರಿಗೆ ಚುನಾವಣೆಯಲ್ಲಿ ಟಿಕೆಟ್ ನೀಡುವುದಿಲ್ಲ’ ಎಂದರು. </p><p>‘ಆಯೋಗ ಈಗಾಗಲೇ ಸಾಕಷ್ಟು ಲೋಪಗಳನ್ನು ಮಾಡಿದ್ದು, ಇನ್ನಷ್ಟು ಸಮಯ ತೆಗೆದುಕೊಂಡು ಮಾಡಿದ್ದರೆ ವೈಜ್ಞಾನಿಕವಾಗಿ ವರದಿ ಬರುತ್ತಿತ್ತು. ಹಿಂದಿನ ವರದಿ ಅವೈಜ್ಞಾನಿಕವಾಗಿದೆ ಎನ್ನುವ ಕಾರಣಕ್ಕೆ ಅನುಷ್ಠಾನ ಮಾಡಿಲ್ಲ. ಈಗಿನ ವರದಿಯದ್ದೂ ಅದೇ ಪರಿಸ್ಥಿತಿಯಾಗುವ ಆತಂಕವಿದೆ. ದಸರಾ ಹಿಂದೂಗಳ ಹಬ್ಬವಾಗಿದ್ದು, ಹಬ್ಬದ ಸಮಯದಲ್ಲಿ ಈ ಸಮೀಕ್ಷೆಯ ಅಗತ್ಯವಾದರೂ ಏನಿತ್ತು’ ಎಂದು ಪ್ರಶ್ನಿಸಿದರು.</p><p>ಹುಬ್ಬಳ್ಳಿಯಲ್ಲಿ ನಡೆದ ಏಕತಾ ಸಮಾವೇಶದ ಬಗ್ಗೆ ಪ್ರತಿಕ್ರಿಯಿಸಿ ’ಅಲ್ಲಿ ನಡೆದಿದ್ದು ಬೇಡಜಂಗಮ ಸಮಾವೇಶ. ಆ ಸಮಾವೇಶಕ್ಕೆ ಪಂಚಮಸಾಲಿ ಸಮುದಾಯಕ್ಕೂ ಯಾವುದೇ ಸಂಬಂಧವಿಲ್ಲ. ಅವರು ನಮ್ಮ ಪೀಠಗಳನ್ನು ಗಣನೆಗೆ ತೆಗೆದುಕೊಂಡಿಲ್ಲ. ಕಾರ್ಯಕ್ರಮ ಸಂಪೂರ್ಣ ವಿಫಲವಾಗಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>