<p>ಗಂಗಾವತಿ: ನಗರದ ತಾಲ್ಲೂಕು ನ್ಯಾಯಾಲಯದ ಕಚೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಆರಂಭಿಸಿರುವ ನ್ಯಾಯ ಸಂಯೋಗ ಕಚೇರಿ ಹಾಗೂ ಉಚಿತ ಕಾನೂನು ಸಲಹಾ ಕೇಂದ್ರವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಂ.ಜಿ.ಶಿವಳ್ಳಿ ಬುಧವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿ, ಸಾರ್ವಜನಿಕರು ಈ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ನೂತನವಾಗಿ ಆರಂಭಿಸಲಾಗಿರುವ ಈ ಕೇಂದ್ರದಲ್ಲಿ ಉಚಿತ ಕಾನೂನು ಸೇವೆ ಮತ್ತು ಕಾನೂನು ಅರಿವು-ನೆರವು, ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಕ್ಕೆ ಸಂಬಂಧಪಟ್ಟ ಮಾಹಿತಿ ನೀಡಲಾಗುವುದು ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಮಾತನಾಡಿ, ಕಾನೂನು ಸಲಹಾ ಕೇಂದ್ರವು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ಒದಗಿಸಲಾಗುವುದು. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದರು.</p>.<p>ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಗೌರಮ್ಮ ಪಾಟೀಲ್, ವಕೀಲರಾದ ವಿರುಪಾಕ್ಷಪ್ಪ ಭಾವಿಕಟ್ಟಿ, ವಿ.ಎನ್.ಪಾಟೀಲ, ಟಿ.ಮಂಜುನಾಥ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ನಗರದ ತಾಲ್ಲೂಕು ನ್ಯಾಯಾಲಯದ ಕಚೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಆರಂಭಿಸಿರುವ ನ್ಯಾಯ ಸಂಯೋಗ ಕಚೇರಿ ಹಾಗೂ ಉಚಿತ ಕಾನೂನು ಸಲಹಾ ಕೇಂದ್ರವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಂ.ಜಿ.ಶಿವಳ್ಳಿ ಬುಧವಾರ ಉದ್ಘಾಟಿಸಿದರು.</p>.<p>ನಂತರ ಮಾತನಾಡಿ, ಸಾರ್ವಜನಿಕರು ಈ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.</p>.<p>ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ನೂತನವಾಗಿ ಆರಂಭಿಸಲಾಗಿರುವ ಈ ಕೇಂದ್ರದಲ್ಲಿ ಉಚಿತ ಕಾನೂನು ಸೇವೆ ಮತ್ತು ಕಾನೂನು ಅರಿವು-ನೆರವು, ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಕ್ಕೆ ಸಂಬಂಧಪಟ್ಟ ಮಾಹಿತಿ ನೀಡಲಾಗುವುದು ಎಂದರು.</p>.<p>ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಮಾತನಾಡಿ, ಕಾನೂನು ಸಲಹಾ ಕೇಂದ್ರವು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ಒದಗಿಸಲಾಗುವುದು. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದರು.</p>.<p>ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಗೌರಮ್ಮ ಪಾಟೀಲ್, ವಕೀಲರಾದ ವಿರುಪಾಕ್ಷಪ್ಪ ಭಾವಿಕಟ್ಟಿ, ವಿ.ಎನ್.ಪಾಟೀಲ, ಟಿ.ಮಂಜುನಾಥ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>