ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಸಲಹಾ ಕೇಂದ್ರ ಉದ್ಘಾಟನೆ

Last Updated 1 ಜುಲೈ 2021, 4:31 IST
ಅಕ್ಷರ ಗಾತ್ರ

ಗಂಗಾವತಿ: ನಗರದ ತಾಲ್ಲೂಕು ನ್ಯಾಯಾಲಯದ ಕಚೇರಿಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿಯಿಂದ ಆರಂಭಿಸಿರುವ ನ್ಯಾಯ ಸಂಯೋಗ ಕಚೇರಿ ಹಾಗೂ ಉಚಿತ ಕಾನೂನು ಸಲಹಾ ಕೇಂದ್ರವನ್ನು ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಎಂ.ಜಿ.ಶಿವಳ್ಳಿ ಬುಧವಾರ ಉದ್ಘಾಟಿಸಿದರು.

ನಂತರ ಮಾತನಾಡಿ, ಸಾರ್ವಜನಿಕರು ಈ ಕೇಂದ್ರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿ.ನಾಗರಾಜ್ ಮಾತನಾಡಿ, ನೂತನವಾಗಿ ಆರಂಭಿಸಲಾಗಿರುವ ಈ ಕೇಂದ್ರದಲ್ಲಿ ಉಚಿತ ಕಾನೂನು ಸೇವೆ ಮತ್ತು ಕಾನೂನು ಅರಿವು-ನೆರವು, ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಕ್ಕೆ ಸಂಬಂಧಪಟ್ಟ ಮಾಹಿತಿ ನೀಡಲಾಗುವುದು ಎಂದರು.

ವಕೀಲರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುಸಾಲಿ ಮಾತನಾಡಿ, ಕಾನೂನು ಸಲಹಾ ಕೇಂದ್ರವು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ. ಸಂತ್ರಸ್ತರ ಪರಿಹಾರ ಯೋಜನೆ ಅಡಿಯಲ್ಲಿ ಪರಿಹಾರ ಒದಗಿಸಲಾಗುವುದು. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥ ಪಡಿಸಲಾಗುವುದು ಎಂದರು.

ಈ ವೇಳೆ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಗೌರಮ್ಮ ಪಾಟೀಲ್, ವಕೀಲರಾದ ವಿರುಪಾಕ್ಷಪ್ಪ ಭಾವಿಕಟ್ಟಿ, ವಿ.ಎನ್.ಪಾಟೀಲ, ಟಿ.ಮಂಜುನಾಥ ಸೇರಿದಂತೆ ಹಲವರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT