ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದ್ದು, ವಸತಿ ನಿಲಯಗಳಲ್ಲಿ ಹಾಸಿಗೆ, ವೆಂಟಿಲೇಟರ್,ಆಕ್ಸಿಜನ್ ಸೌಲಭ್ಯ ಸೇರಿದಂತೆ ವಿವಿಧ ವೈದ್ಯಕೀಯ ಉಪಚಾರಕ್ಕೆ ವೈದ್ಯರಿಗೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಕೈಗಾರಿಕೆಗಳು ತಯಾರಿಸುವ ಆಕ್ಸಿಜನ್ ಹೆಚ್ಚಿನ ಮಟ್ಟದಲ್ಲಿ ಇದ್ದು, ಯಾವುದೇ ಸಮಯದಲ್ಲಿ 200 ಸಿಲಿಂಡರ್ ಪೂರೈಸುವುದಾಗಿ ಭರವಸೆ ನೀಡಿದ್ದಾರೆ.