<p><strong>ಕೊಪ್ಪಳ:</strong> 'ಜಿಲ್ಲೆಯಲ್ಲಿ ಹೊಸದಾಗಿ ವಿಶ್ವ ವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿದ್ದು, ಸಾಧಕ-ಬಾಧಕ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು' ಎಂದು ಬಳ್ಳಾರಿವಿಜಯನಗರವಿವಿ ಕುಲಪತಿ ಹಾಗೂ ತಜ್ಞರ ಸಮಿತಿ ಅಧ್ಯಕ್ಷ ಪ್ರೊ.ಸಿದ್ದು.ಪಿ.ಅಲಗೂರ ಹೇಳಿದರು.</p>.<p>ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆ ಕುರಿತ ಅಧ್ಯಯನಕ್ಕಾಗಿ ರಚಿಸಿದ ತಜ್ಞರ ಸಮಿತಿ, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಆಯೋಜಿಸಿದ್ದ ಅವರು ಸಭೆಯಲ್ಲಿ ಮಾತನಾಡಿದರು.</p>.<p>ಜಿಲ್ಲೆಯು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಟ್ಟಿದ್ದು, ಇಲ್ಲಿನವಿದ್ಯಾರ್ಥಿ ಗಳಿಗೆ ಹಾಗೂ ಈ ಭಾಗದ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಹೊಸವಿವಿ ಸ್ಥಾಪಿಸಲು ಉದ್ದೇಶಿಸಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಮಹತ್ವವನ್ನು ನೀಡುವ ಸದುದ್ದೇಶದಿಂದ ಸರ್ಕಾರ ತಜ್ಞರ ಸಮಿತಿ ರಚಿಸಿದೆ.ಜಿಲ್ಲೆಯ ವಿವಿಧ ಕಾಲೇಜಿನ ಪ್ರಾಚಾರ್ಯರು, ಶಿಕ್ಷಣ ತಜ್ಞರು, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ಮೂಲಸೌಕರ್ಯ ಅಧ್ಯಯನ ಮಾಡಿ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಜಾರಿ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಅದರನ್ವಯ ಜಿಲ್ಲೆಯಲ್ಲಿ ಹೊಸವಿವಿ ಸ್ಥಾಪನೆಗೆ ನಿಗದಿತ ಅಂಶ ಅಧ್ಯಯನ ಮಾಡಬೇಕಾಗಿದೆ ಎಂದರು.</p>.<p>ಯಲಬುರ್ಗಾ ಶಾಸಕರಾದ ಹಾಲಪ್ಪ ಆಚಾರ್ ಮಾತನಾಡಿ, 2016 ರಲ್ಲಿ ಜಿಲ್ಲೆಯಲ್ಲಿ ಬಳ್ಳಾರಿ ವಿವಿ ಕೊಪ್ಪಳ, ಗಂಗಾವತಿ, ಯಲಬುರ್ಗಾ ತಾಲ್ಲೂಕುಗಳಲ್ಲಿರುವ ಈ ಕೇಂದ್ರಗಳಲ್ಲಿ ಸುಮಾರು 1300 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಇದು ನಮ್ಮ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಮಾಡಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಆಸಕ್ತಿ ತೋರಿಸುತ್ತದೆ ಎಂದರು.</p>.<p>ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ, ವಿವಿ ಸ್ಥಾಪನೆಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಉನ್ನತ ತಾಂತ್ರಿಕ ಹುದ್ದೆಗಳಿಗೆ ಸ್ಥಳೀಯ ವಿದ್ಯಾರ್ಥಿಗಳೇ ಆಯ್ಕೆಯಾಗಬಹುದು. ಆದ್ದರಿಂದ ಎಲ್ಲ ರೀತಿಯ ಅಭಿವೃದ್ಧಿಗೆ ಪೂರಕವಾದ ವಿಷಯ ಹೊಂದಿರುವ ವಿವಿಜಿಲ್ಲೆಯಲ್ಲಿ ಸ್ಥಾಪನೆಯಾಗಬೇಕು ಎಂದು ಹೇಳಿದರು.</p>.<p>ಸಮಿತಿ ಸದಸ್ಯರಾದ ವಿಜಯಪುರದ ಅಕ್ಕಮಹಾದೇವಿವಿವಿ ವಿಶ್ರಾಂತ ಕುಲಪತಿ ಡಾ.ಮೀನಾ ಚಂದಾವರ್ಕರ್, ಧಾರವಾಡದವಿವಿ ಕುಲಪತಿಪ್ರೊ.ಕೆ.ಬಿ.ಗುಡಸಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕಇದ್ದರು.</p>.<p>ಡಿಡಿಪಿಯು ದೇವೇಂದ್ರಪ್ಪ ಗಡೇದ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಶ್ರೀಕೃಷ್ಣ ದೇವರಾಯ ವಿವಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಬಸವರಾಜ ಬೆಣ್ಣಿ, ಅಭಯ್ ಸಾಲ್ವೆಂಟ್ ಪ್ರೈ.ಲಿ.ನ ನಿರ್ದೇಶಕ ಮಹಾವೀರ್ ಮೆಹ್ತಾ ಅಭಿಪ್ರಾಯ ತಿಳಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತಳಕಲ್ ಎಂಜಿನಿಯರಿಂಗ್ ಕಾಲೇಜಿನ ಬಸವರಾಜ ಡಂಬಳ, ಪೂಜಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ದೊಡ್ಡಮನಿ, ಲೋಕೋಪಯೋಗಿ ಇಲಾಖೆ ಎಇಇತಿರುಮಲರಾವ ಕುಲಕರ್ಣಿ, ಕೌಶಲ ಅಭಿವೃದ್ಧಿ ಅಧಿಕಾರಿ ಪ್ರಾಣೇಶ ಹಾಗೂ ಇತರರು ಇದ್ದರು.</p>.<p><strong>***</strong></p>.<p>ಜಿಲ್ಲೆಯಲ್ಲಿ ಹೆಚ್ಚಿನ ಸಾಮರ್ಥ್ಯವಿರುವ ಮಾನವ ಸಂಪನ್ಮೂಲ, ಅಭಿವೃದ್ಧಿಗೆ ಪೂರಕವಾಗಿರುವ ಭೌಗೋಳಿಕ, ಸಾಮಾಜಿಕ ಅಂಶಗಳು ಹೆಚ್ಚಾಗಿದ್ದು, ಅದನ್ನು ಸೂಕ್ತ ಮಾರ್ಗದಲ್ಲಿ ಬಳಸಿಕೊಳ್ಳುವುದು ಮುಖ್ಯ.</p>.<p><strong>- ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> 'ಜಿಲ್ಲೆಯಲ್ಲಿ ಹೊಸದಾಗಿ ವಿಶ್ವ ವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿದ್ದು, ಸಾಧಕ-ಬಾಧಕ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು' ಎಂದು ಬಳ್ಳಾರಿವಿಜಯನಗರವಿವಿ ಕುಲಪತಿ ಹಾಗೂ ತಜ್ಞರ ಸಮಿತಿ ಅಧ್ಯಕ್ಷ ಪ್ರೊ.ಸಿದ್ದು.ಪಿ.ಅಲಗೂರ ಹೇಳಿದರು.</p>.<p>ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವವಿದ್ಯಾನಿಲಯ ಸ್ಥಾಪನೆ ಕುರಿತ ಅಧ್ಯಯನಕ್ಕಾಗಿ ರಚಿಸಿದ ತಜ್ಞರ ಸಮಿತಿ, ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಆಯೋಜಿಸಿದ್ದ ಅವರು ಸಭೆಯಲ್ಲಿ ಮಾತನಾಡಿದರು.</p>.<p>ಜಿಲ್ಲೆಯು ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಟ್ಟಿದ್ದು, ಇಲ್ಲಿನವಿದ್ಯಾರ್ಥಿ ಗಳಿಗೆ ಹಾಗೂ ಈ ಭಾಗದ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲೆಯಲ್ಲಿ ಹೊಸವಿವಿ ಸ್ಥಾಪಿಸಲು ಉದ್ದೇಶಿಸಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಮಹತ್ವವನ್ನು ನೀಡುವ ಸದುದ್ದೇಶದಿಂದ ಸರ್ಕಾರ ತಜ್ಞರ ಸಮಿತಿ ರಚಿಸಿದೆ.ಜಿಲ್ಲೆಯ ವಿವಿಧ ಕಾಲೇಜಿನ ಪ್ರಾಚಾರ್ಯರು, ಶಿಕ್ಷಣ ತಜ್ಞರು, ಅಧಿಕಾರಿಗಳು, ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ, ಅಗತ್ಯವಿರುವ ಮೂಲಸೌಕರ್ಯ ಅಧ್ಯಯನ ಮಾಡಿ ವರದಿ ಸಲ್ಲಿಸಲಿದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಜಾರಿ ಮಾಡಿರುವ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮಹತ್ವದ ಯೋಜನೆ ಹಮ್ಮಿಕೊಂಡಿದೆ. ಅದರನ್ವಯ ಜಿಲ್ಲೆಯಲ್ಲಿ ಹೊಸವಿವಿ ಸ್ಥಾಪನೆಗೆ ನಿಗದಿತ ಅಂಶ ಅಧ್ಯಯನ ಮಾಡಬೇಕಾಗಿದೆ ಎಂದರು.</p>.<p>ಯಲಬುರ್ಗಾ ಶಾಸಕರಾದ ಹಾಲಪ್ಪ ಆಚಾರ್ ಮಾತನಾಡಿ, 2016 ರಲ್ಲಿ ಜಿಲ್ಲೆಯಲ್ಲಿ ಬಳ್ಳಾರಿ ವಿವಿ ಕೊಪ್ಪಳ, ಗಂಗಾವತಿ, ಯಲಬುರ್ಗಾ ತಾಲ್ಲೂಕುಗಳಲ್ಲಿರುವ ಈ ಕೇಂದ್ರಗಳಲ್ಲಿ ಸುಮಾರು 1300 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ಇದು ನಮ್ಮ ಜಿಲ್ಲೆಯಲ್ಲಿ ಉನ್ನತ ಶಿಕ್ಷಣ ಮಾಡಲು ಬಯಸುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಆಸಕ್ತಿ ತೋರಿಸುತ್ತದೆ ಎಂದರು.</p>.<p>ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ, ವಿವಿ ಸ್ಥಾಪನೆಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳಲ್ಲಿ ಉನ್ನತ ತಾಂತ್ರಿಕ ಹುದ್ದೆಗಳಿಗೆ ಸ್ಥಳೀಯ ವಿದ್ಯಾರ್ಥಿಗಳೇ ಆಯ್ಕೆಯಾಗಬಹುದು. ಆದ್ದರಿಂದ ಎಲ್ಲ ರೀತಿಯ ಅಭಿವೃದ್ಧಿಗೆ ಪೂರಕವಾದ ವಿಷಯ ಹೊಂದಿರುವ ವಿವಿಜಿಲ್ಲೆಯಲ್ಲಿ ಸ್ಥಾಪನೆಯಾಗಬೇಕು ಎಂದು ಹೇಳಿದರು.</p>.<p>ಸಮಿತಿ ಸದಸ್ಯರಾದ ವಿಜಯಪುರದ ಅಕ್ಕಮಹಾದೇವಿವಿವಿ ವಿಶ್ರಾಂತ ಕುಲಪತಿ ಡಾ.ಮೀನಾ ಚಂದಾವರ್ಕರ್, ಧಾರವಾಡದವಿವಿ ಕುಲಪತಿಪ್ರೊ.ಕೆ.ಬಿ.ಗುಡಸಿ, ರಾಜ್ಯ ಉನ್ನತ ಶಿಕ್ಷಣ ಪರಿಷತ್ನ ಕಾರ್ಯನಿರ್ವಾಹಕ ನಿರ್ದೇಶಕಇದ್ದರು.</p>.<p>ಡಿಡಿಪಿಯು ದೇವೇಂದ್ರಪ್ಪ ಗಡೇದ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಶ್ರೀಕೃಷ್ಣ ದೇವರಾಯ ವಿವಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಬಸವರಾಜ ಬೆಣ್ಣಿ, ಅಭಯ್ ಸಾಲ್ವೆಂಟ್ ಪ್ರೈ.ಲಿ.ನ ನಿರ್ದೇಶಕ ಮಹಾವೀರ್ ಮೆಹ್ತಾ ಅಭಿಪ್ರಾಯ ತಿಳಿಸಿದರು.</p>.<p>ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ತಳಕಲ್ ಎಂಜಿನಿಯರಿಂಗ್ ಕಾಲೇಜಿನ ಬಸವರಾಜ ಡಂಬಳ, ಪೂಜಾರ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಂಗಾಧರ ದೊಡ್ಡಮನಿ, ಲೋಕೋಪಯೋಗಿ ಇಲಾಖೆ ಎಇಇತಿರುಮಲರಾವ ಕುಲಕರ್ಣಿ, ಕೌಶಲ ಅಭಿವೃದ್ಧಿ ಅಧಿಕಾರಿ ಪ್ರಾಣೇಶ ಹಾಗೂ ಇತರರು ಇದ್ದರು.</p>.<p><strong>***</strong></p>.<p>ಜಿಲ್ಲೆಯಲ್ಲಿ ಹೆಚ್ಚಿನ ಸಾಮರ್ಥ್ಯವಿರುವ ಮಾನವ ಸಂಪನ್ಮೂಲ, ಅಭಿವೃದ್ಧಿಗೆ ಪೂರಕವಾಗಿರುವ ಭೌಗೋಳಿಕ, ಸಾಮಾಜಿಕ ಅಂಶಗಳು ಹೆಚ್ಚಾಗಿದ್ದು, ಅದನ್ನು ಸೂಕ್ತ ಮಾರ್ಗದಲ್ಲಿ ಬಳಸಿಕೊಳ್ಳುವುದು ಮುಖ್ಯ.</p>.<p><strong>- ವಿಕಾಸ್ ಕಿಶೋರ್ ಸುರಳ್ಕರ್, ಜಿಲ್ಲಾಧಿಕಾರಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>