<p><strong>ಗಂಗಾವತಿ</strong>: ಎರಡ್ಮೂರು ದಿನಗಳಿಂದ ಸುರಿದ ಸಾಧಾರಣ ಮಳೆಗೆ ಮನೆಯ ಶೀಟ್ ಮತ್ತು ಗೋಡೆ ಕುಸಿದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.</p><p>ಹೆಬ್ಬಾಳ ಗ್ರಾಮದ ಪ್ರಶಾಂತಿ ಮೃತಪಟ್ಟ ಮಗು. ಘಟನೆಯಲ್ಲಿ ಬಾಲಕಿಯ ತಾಯಿ ಹನುಮಂತಿ, ಕುಟುಂಬ ಸದಸ್ಯರಾದ ದುರ್ಗಮ್ಮ, ಭೀಮಮ್ಮ, ಹುಸೇನಪ್ಪ, ಫಕೀರಪ್ಪ ಎನ್ನುವವರಿಗೆ ಗಾಯಗಳಾಗಿವೆ.</p><p>ಗಾಯಾಳುಗಳನ್ನು ಗಂಗಾವತಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಳೆದ ಒಂದು ವಾರದಿಂದ ಗಂಗಾವತಿ ತಾಲ್ಲೂಕಿನಲ್ಲಿ ಧಾರಕಾರ ಮಳೆ ಆಗಿದೆ. ಈಚೆಗೆ ಹನುಮಂತಿ ಎನ್ನುವವರು ಮಗಳೊಂದಿಗೆ ಕುಟುಂಬಸ್ಥರನ್ನು ಭೇಟಿಯಾಗಲು ತವರು ಮನೆಗೆ ಬಂದಿದ್ದಾಗ ಈ ಅವಘಡ ನಡೆದಿದೆ.</p><p>ಬುಧವಾರ ತಡರಾತ್ರಿ ಮನೆಯ ಚಾವಣಿ ಹಾಗೂ ಗೋಡೆಯ ಕಲ್ಲುಗಳು ಕುಟುಂಬಸ್ಥರ ಮೇಲೆ ಬಿದ್ದಿದ್ದು, ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.</p><p>ಗಂಗಾವತಿ ತಹಶೀಲ್ದಾರ್ ಯು.ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ಎರಡ್ಮೂರು ದಿನಗಳಿಂದ ಸುರಿದ ಸಾಧಾರಣ ಮಳೆಗೆ ಮನೆಯ ಶೀಟ್ ಮತ್ತು ಗೋಡೆ ಕುಸಿದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ.</p><p>ಹೆಬ್ಬಾಳ ಗ್ರಾಮದ ಪ್ರಶಾಂತಿ ಮೃತಪಟ್ಟ ಮಗು. ಘಟನೆಯಲ್ಲಿ ಬಾಲಕಿಯ ತಾಯಿ ಹನುಮಂತಿ, ಕುಟುಂಬ ಸದಸ್ಯರಾದ ದುರ್ಗಮ್ಮ, ಭೀಮಮ್ಮ, ಹುಸೇನಪ್ಪ, ಫಕೀರಪ್ಪ ಎನ್ನುವವರಿಗೆ ಗಾಯಗಳಾಗಿವೆ.</p><p>ಗಾಯಾಳುಗಳನ್ನು ಗಂಗಾವತಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಳೆದ ಒಂದು ವಾರದಿಂದ ಗಂಗಾವತಿ ತಾಲ್ಲೂಕಿನಲ್ಲಿ ಧಾರಕಾರ ಮಳೆ ಆಗಿದೆ. ಈಚೆಗೆ ಹನುಮಂತಿ ಎನ್ನುವವರು ಮಗಳೊಂದಿಗೆ ಕುಟುಂಬಸ್ಥರನ್ನು ಭೇಟಿಯಾಗಲು ತವರು ಮನೆಗೆ ಬಂದಿದ್ದಾಗ ಈ ಅವಘಡ ನಡೆದಿದೆ.</p><p>ಬುಧವಾರ ತಡರಾತ್ರಿ ಮನೆಯ ಚಾವಣಿ ಹಾಗೂ ಗೋಡೆಯ ಕಲ್ಲುಗಳು ಕುಟುಂಬಸ್ಥರ ಮೇಲೆ ಬಿದ್ದಿದ್ದು, ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ.</p><p>ಗಂಗಾವತಿ ತಹಶೀಲ್ದಾರ್ ಯು.ನಾಗರಾಜ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>