<p><strong>ತಾವರಗೇರಾ: </strong>ಕಿಸಾನ್ ಸಮ್ಮಾನ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ₹6 ಸಾವಿರ ಪಡೆಯುತ್ತಿರುವ ರೈತರಿಗೆ ಬ್ಯಾಂಕ್ನ ನಿಬಂಧನೆಗೊಳಪಟ್ಟು ಅರ್ಹತೆಗೆ ಅನುಗುಣವಾಗಿ ಕಿಸಾನ್ ಕಾರ್ಡ್ ಸಾಲ ಮಂಜೂರು ಮಾಡಲಾಗುವುದು ಎಂದು ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ದೊಡ್ಡಪ್ಪ ಜ್ಯೋತಿ ಹೇಳಿದರು.</p>.<p>ಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಶನಿವಾರ ನಡೆದ ಗ್ರಾಹಕರ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ರೈತರು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳಿಗೆ ನೋಂದಾಯಿಸಿಕೊಳ್ಳಬೇಕು ಎಂದರು.</p>.<p>ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಕ್ರೆಡಿಟ್ ಕಾರ್ಡ್ ಸಾಲ ಮಂಜೂರಾತಿ ಪತ್ರ ನೀಡಲಾಯಿತು.</p>.<p>ಬ್ಯಾಂಕ್ನ ವ್ಯವಸ್ಥಾಪಕ ಚಂದ್ರಶೇಖರ ಮಾತನಾಡಿ,‘ಕೇಂದ್ರ ಸರ್ಕಾರದ ನೂತನ ಯೋಜನೆ ಜಾರಿಯಾಗಿದೆ. ಐದು ಎಕರೆಗಿಂತ ಕಡಿಮೆ ಭೂಮಿ ಇರುವ ರೈತರು ತಮ್ಮ ಪಹಣಿ ಮೇಲೆ ₹1 ಲಕ್ಷ 60 ಸಾವಿರವರೆಗೆ ಜಾಮೀನುದಾರರಿಲ್ಲದೆ ಸಾಲ ಪಡೆಯಬಹುದು. ಇದಕ್ಕೆ ಒಂದು ವರ್ಷಕ್ಕೆ ಕೇವಲ ₹4 ಸಾವಿರ ಬಡ್ಡಿ ಕಟ್ಟಬೇಕು ಎಂದು ಹೇಳಿದರು</p>.<p>ರಘುಪತಿ ಸಾಲ ಸೌಲಭ್ಯದ ಕುರಿತು ವಿವರಿಸಿದರು. ದೊಡ್ಡಬಸಪ್ಪ ಮತ್ತು ಬ್ಯಾಂಕ್ ವ್ಯವಹಾರ ಪ್ರತಿನಿಧಿ ಪಂಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ: </strong>ಕಿಸಾನ್ ಸಮ್ಮಾನ ಯೋಜನೆ ಅಡಿಯಲ್ಲಿ ವಾರ್ಷಿಕವಾಗಿ ₹6 ಸಾವಿರ ಪಡೆಯುತ್ತಿರುವ ರೈತರಿಗೆ ಬ್ಯಾಂಕ್ನ ನಿಬಂಧನೆಗೊಳಪಟ್ಟು ಅರ್ಹತೆಗೆ ಅನುಗುಣವಾಗಿ ಕಿಸಾನ್ ಕಾರ್ಡ್ ಸಾಲ ಮಂಜೂರು ಮಾಡಲಾಗುವುದು ಎಂದು ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ದೊಡ್ಡಪ್ಪ ಜ್ಯೋತಿ ಹೇಳಿದರು.</p>.<p>ಪಟ್ಟಣದ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ಶನಿವಾರ ನಡೆದ ಗ್ರಾಹಕರ ಮಾಹಿತಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ರೈತರು ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಸುರಕ್ಷಾ ಭೀಮಾ ಯೋಜನೆ, ಅಟಲ್ ಪಿಂಚಣಿ ಯೋಜನೆಗಳಿಗೆ ನೋಂದಾಯಿಸಿಕೊಳ್ಳಬೇಕು ಎಂದರು.</p>.<p>ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯ ಕ್ರೆಡಿಟ್ ಕಾರ್ಡ್ ಸಾಲ ಮಂಜೂರಾತಿ ಪತ್ರ ನೀಡಲಾಯಿತು.</p>.<p>ಬ್ಯಾಂಕ್ನ ವ್ಯವಸ್ಥಾಪಕ ಚಂದ್ರಶೇಖರ ಮಾತನಾಡಿ,‘ಕೇಂದ್ರ ಸರ್ಕಾರದ ನೂತನ ಯೋಜನೆ ಜಾರಿಯಾಗಿದೆ. ಐದು ಎಕರೆಗಿಂತ ಕಡಿಮೆ ಭೂಮಿ ಇರುವ ರೈತರು ತಮ್ಮ ಪಹಣಿ ಮೇಲೆ ₹1 ಲಕ್ಷ 60 ಸಾವಿರವರೆಗೆ ಜಾಮೀನುದಾರರಿಲ್ಲದೆ ಸಾಲ ಪಡೆಯಬಹುದು. ಇದಕ್ಕೆ ಒಂದು ವರ್ಷಕ್ಕೆ ಕೇವಲ ₹4 ಸಾವಿರ ಬಡ್ಡಿ ಕಟ್ಟಬೇಕು ಎಂದು ಹೇಳಿದರು</p>.<p>ರಘುಪತಿ ಸಾಲ ಸೌಲಭ್ಯದ ಕುರಿತು ವಿವರಿಸಿದರು. ದೊಡ್ಡಬಸಪ್ಪ ಮತ್ತು ಬ್ಯಾಂಕ್ ವ್ಯವಹಾರ ಪ್ರತಿನಿಧಿ ಪಂಪಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>